ಗ್ರಾಹಕರ ಬ್ಯಾಂಕ್​ ಖಾತೆಗೆ ಬರಲ್ಲ ಎಲ್​ಪಿಜಿ ಸಬ್ಸಿಡಿ ಹಣ; ಕಾರಣವೇನು ಗೊತ್ತೆ?

blank

ನವದೆಹಲಿ: ಮನೆ ಬಳಕೆಯ ಅಡುಗೆ ಅನಿಲದ ಮೇಲಿನ ಸಬ್ಸಿಡಿ ಇನ್ನು ಮುಂದೆ ಗ್ರಾಹಕರ ಬ್ಯಾಂಕ್​ ಖಾತೆಗೆ ಜಮಾ ಆಗುವುದಿಲ್ಲ. ಕಾರಣ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್​ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇನ್ನೊಂದೆಡೆ, ತೈಲೋತ್ಪನ್ನಗಳಿಂದ ಬರಬೇಕಾದ ತೆರಿಗೆ ಆದಾಯ ಕುಸಿಯದಂತಿರಲು ಸರ್ಕಾರ ನಿಯಮಿತವಾಗಿ ಪೆಟ್ರೋಲ್​, ಡೀಸೆಲ್​ ಹಾಗೂ ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಬಂದಿದೆ.

ಇದನ್ನೂ ಓದಿ; ವಾಹನಗಳಿಗೆ ಫಾಸ್ಟ್ಯಾಗ್​ ಇಲ್ಲದಿದ್ದರೆ ಥರ್ಡ್​ ಪಾರ್ಟಿ ಇನ್ಶುರೆನ್ಸ್​ ಸಿಗೋದಿಲ್ಲ…! 

ಈ ಕಾರಣದಿಂದಾಗಿ ಸದ್ಯ ಗೃಹ ಬಳಕೆಗೆ ನೀಡಲಾಗುತ್ತಿರುವ ಸಬ್ಸಿಡಿ ಅಡುಗೆ ಅನಿಲದ ದರ ಹಾಗೂ ಮಾರುಕಟ್ಟೆಯ ಬೆಲೆ ಒಂದೇ ಆಗಿದೆ. ಈ ಕಾರಣದಿಂದಾಗಿ ಸಬ್ಸಿಡಿ ನೀಡುವುದನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸೆ.1ರಂದು ಸಬ್ಸಿಡಿರಹಿತ ಹಾಗೂ ಸಬ್ಸಿಡಿಸಹಿತ ಅಡುಗೆ ಅನಿಲದ 14.2 ಕೆಜಿ ಸಿಲಿಂಡರ್​ ಬೆಲೆ 594 ರೂ. ಆಗಿತ್ತು. ಹೀಗಾಗಿ ವ್ಯತ್ಯಾಸದ ಹಣವನ್ನು ಗ್ರಾಹಕರ ಖಾತೆಗೆ ವರ್ಗಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಈ ನಿರ್ಧಾರದಿಂದಾಗಿ ಸರ್ಕಾರಕ್ಕೆ ಕನಿಷ್ಠ 20 ಸಾವಿರ ಕೋಟಿ ರೂ.ಗಳ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ; 50 ರಾಜ್ಯಗಳಿಗೆ ಸೂಚನೆ ನೀಡಿದ್ಯಾರು?

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…