More

    ಗ್ರಾಹಕರ ಬ್ಯಾಂಕ್​ ಖಾತೆಗೆ ಬರಲ್ಲ ಎಲ್​ಪಿಜಿ ಸಬ್ಸಿಡಿ ಹಣ; ಕಾರಣವೇನು ಗೊತ್ತೆ?

    ನವದೆಹಲಿ: ಮನೆ ಬಳಕೆಯ ಅಡುಗೆ ಅನಿಲದ ಮೇಲಿನ ಸಬ್ಸಿಡಿ ಇನ್ನು ಮುಂದೆ ಗ್ರಾಹಕರ ಬ್ಯಾಂಕ್​ ಖಾತೆಗೆ ಜಮಾ ಆಗುವುದಿಲ್ಲ. ಕಾರಣ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಕೋವಿಡ್​ ಕಾರಣದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇನ್ನೊಂದೆಡೆ, ತೈಲೋತ್ಪನ್ನಗಳಿಂದ ಬರಬೇಕಾದ ತೆರಿಗೆ ಆದಾಯ ಕುಸಿಯದಂತಿರಲು ಸರ್ಕಾರ ನಿಯಮಿತವಾಗಿ ಪೆಟ್ರೋಲ್​, ಡೀಸೆಲ್​ ಹಾಗೂ ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಬಂದಿದೆ.

    ಇದನ್ನೂ ಓದಿ; ವಾಹನಗಳಿಗೆ ಫಾಸ್ಟ್ಯಾಗ್​ ಇಲ್ಲದಿದ್ದರೆ ಥರ್ಡ್​ ಪಾರ್ಟಿ ಇನ್ಶುರೆನ್ಸ್​ ಸಿಗೋದಿಲ್ಲ…! 

    ಈ ಕಾರಣದಿಂದಾಗಿ ಸದ್ಯ ಗೃಹ ಬಳಕೆಗೆ ನೀಡಲಾಗುತ್ತಿರುವ ಸಬ್ಸಿಡಿ ಅಡುಗೆ ಅನಿಲದ ದರ ಹಾಗೂ ಮಾರುಕಟ್ಟೆಯ ಬೆಲೆ ಒಂದೇ ಆಗಿದೆ. ಈ ಕಾರಣದಿಂದಾಗಿ ಸಬ್ಸಿಡಿ ನೀಡುವುದನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಸೆ.1ರಂದು ಸಬ್ಸಿಡಿರಹಿತ ಹಾಗೂ ಸಬ್ಸಿಡಿಸಹಿತ ಅಡುಗೆ ಅನಿಲದ 14.2 ಕೆಜಿ ಸಿಲಿಂಡರ್​ ಬೆಲೆ 594 ರೂ. ಆಗಿತ್ತು. ಹೀಗಾಗಿ ವ್ಯತ್ಯಾಸದ ಹಣವನ್ನು ಗ್ರಾಹಕರ ಖಾತೆಗೆ ವರ್ಗಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಈ ನಿರ್ಧಾರದಿಂದಾಗಿ ಸರ್ಕಾರಕ್ಕೆ ಕನಿಷ್ಠ 20 ಸಾವಿರ ಕೋಟಿ ರೂ.ಗಳ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

    ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ; 50 ರಾಜ್ಯಗಳಿಗೆ ಸೂಚನೆ ನೀಡಿದ್ಯಾರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts