ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್​ ತೀರ್ಪು ಅಂತಿಮ: ತಮಿಳುನಾಡು ಸಚಿವ ದೊರೈ ಮುರುಗನ್

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಾವು ಕರ್ನಾಟಕ ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪು ಅಂತಿಮ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್​ ಹೇಳಿದ್ದಾರೆ. ಕಾವೇರಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ತಮಿಳುನಾಡು ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಮಾತಿಲ್ಲ ಎಂದಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮಧ್ಯಸ್ಥಿಕೆಗೆ ಕರ್ನಾಟಕ … Continue reading ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್​ ತೀರ್ಪು ಅಂತಿಮ: ತಮಿಳುನಾಡು ಸಚಿವ ದೊರೈ ಮುರುಗನ್