ಸಿ.ಟಿ. ರವಿ, ಡಿವಿಎಸ್ ಹೇಳಿಕೆಗಳಿಗೆ ಪ್ರತಿಕ್ರಿಯಿಸಲು ಸಮಯವಿಲ್ಲ ಎಂದ ಹೈಕೋರ್ಟ್!

blank

ಬೆಂಗಳೂರು: ನ್ಯಾಯಾಂಗದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಸಿ.ಟಿ. ರವಿ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ವಿರುದ್ಧ ಕ್ರಮ ಜರುಗಿಸಲು ಕೋರಿ ಕೆಲವು ವಕೀಲರು ಸಲ್ಲಿಸಿರುವ ಅರ್ಜಿಗಳ ಕುರಿತು ಪ್ರತಿಕ್ರಿಯಿಸಲು ಸಮಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಾಧೀಶರು ಸರ್ವಜ್ಞರಲ್ಲ ಎಂದಿದ್ದ ಸಿ.ಟಿ. ರವಿ ಹಾಗೂ ಲಸಿಕೆ ಉತ್ಪಾದನೆ ಆಗದಿದ್ದರೆ ನಾವೇನು ನೇಣು ಹಾಕಿಕೊಳ್ಳಬೇಕೇ ಎಂದು ಪ್ರಶ್ನಿಸಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಕೋರಿ ಕೆಲವು ವಕೀಲರು ಇ-ಮೇಲ್ ಮೂಲಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು.

ಇದನ್ನೂ ಓದಿ: ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…

ಈ ಕುರಿತು ಪ್ರಸ್ತಾಪಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್, ಈ ಅರ್ಜಿಗಳಿಗೆ ಪ್ರತಿಕ್ರಿಯಿಸಲು ನಮಗೆ ಸಮಯವಿಲ್ಲ. ಕೋವಿಡ್ ನಿರ್ವಹಣೆ ವಿಚಾರದಲ್ಲಿ ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡುತ್ತ ಬಂದಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ. ಎಲ್ಲರೂ ಸಂಯಮ ಕಾಯ್ದುಕೊಳ್ಳಬೇಕು ಎಂದಷ್ಟೇ ಹೇಳಿ, ವಿಚಾರವನ್ನು ಅಲ್ಲಿಗೇ ಮುಕ್ತಾಯಗೊಳಿಸಿದರು.

500 ರೂಪಾಯಿಗೆ ಲಸಿಕೆ ಮಾರಿ ಸಿಕ್ಕಿಬಿದ್ದ ವೈದ್ಯೆ; ಕೋವಿಡ್​ ವ್ಯಾಕ್ಸಿನ್ ಅಕ್ರಮವಾಗಿ ಮಾರುತ್ತಿದ್ದ ಇಬ್ಬರ ಬಂಧನ

ಆಂಬುಲೆನ್ಸ್​, ಗ್ಯಾಸ್​ ಟ್ಯಾಂಕರ್​ ಮಧ್ಯೆ ಭೀಕರ ಅಪಘಾತ: ರೋಗಿ ಸ್ಥಳದಲ್ಲೇ ಸಾವು, ಚಾಲಕ ಸೇರಿ ಮೂವರಿಗೆ ಗಾಯ

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…