More

    ತಾಲೂಕು ಪಂಚಾಯತ್ ಕಚೇರಿಯಲ್ಲೇ ಸಾವಿಗೆ ಶರಣಾದ ನೋಡಲ್ ಅಧಿಕಾರಿ!

    ಧಾರವಾಡ: ಇತ್ತೀಚೆಗೆ ಕೆಲವು ಸರ್ಕಾರಿ ಸಿಬ್ಬಂದಿ/ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗಿದೆ. ಇದೀಗ ಇನ್ನೊಬ್ಬ ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದರಲ್ಲೂ ಈ ಪ್ರಕರಣ ಸರ್ಕಾರಿ ಕಚೇರಿಯೊಳಗೇ ನಡೆದಿದೆ.

    ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಪಂಚಾಯತ್​ ಕಚೇರಿಯಲ್ಲಿ ಈ ಘಟನೆ ನಡೆದಿದೆ. ತಾಲೂಕು ಪಂಚಾಯತ್ ಕಚೇರಿಯ ಸಕ್ರೆಪ್ಪ ಚಕ್ಕೋಡಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಇಲ್ಲಿ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

    ಇದನ್ನೂ ಓದಿ: ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!

    ಕಚೇರಿಯ ಒಂದು ಬದಿಯ ಕಟ್ಟಡದಲ್ಲಿ ಇವರು ಇಂದು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ನವಲಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

    ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

    ನೇರಳೆ ಹಣ್ಣುಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?: ಆರೋಗ್ಯಕ್ಕೇನು ತೊಂದರೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts