ಮುಂದಿನ ಏಪ್ರಿಲ್​ನಿಂದ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಳ್ಳೋಲ್ಲ! ಹೀಗೆಂದವರು ಯಾರು, ಏಕೆ?

ಚಂಡೀಗಡ: ಚುನಾವಣೆ ಬಂತೆಂದರೆ ರಾಜಕಾರಣಿಗಳು ಏನೆಲ್ಲಾ ಆಶ್ವಾಸನೆಗಳನ್ನು ಕೊಡುತ್ತಾರೆ. ತಮ್ಮ ಪಕ್ಷವನ್ನೇ ಅಧಿಕಾರಕ್ಕೆ ತಂದರೆ ಚಂದ್ರನ ಮೇಲೆ ಸೈಟು ಕೊಡಿಸುತ್ತೇವೆ ಎಂದರೂ ಆಶ್ಚರ್ಯವಿಲ್ಲ. ಅಂಥದ್ದೇ ಒಂದು ಪ್ರಯತ್ನವನ್ನು ಆಮ್​ ಆದ್ಮಿ ಪಕ್ಷ(ಎಎಪಿ)ದ ನಾಯಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಚುನಾವಣೆಗೆ ವೇದಿಕೆ ಸಜ್ಜಾಗುತ್ತಿರುವ ಪಂಜಾಬಿನಲ್ಲಿ ಮಾಡಿದ್ದಾರೆ. ರೈತರು ವಿವಿಧ ಸಂಕಷ್ಟಗಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುವುದು ಭಾರತದಾದ್ಯಂತ ಹರಡಿರುವ ಸಮಸ್ಯೆಯಾಗಿದೆ. ಆದ್ದರಿಂದ ಪಂಜಾಬಿನ ರೈತಸಮುದಾಯದವರ ಗಮನ ಸೆಳೆಯಲು ಕೇಜ್ರಿವಾಲ್​ ರೈತರ ಸಮಸ್ಯೆಗಳಿಗೆ ಮುಕ್ತಿ ಹಾಡುವುದಾಗಿ ಭರವಸೆ ನೀಡಿದ್ದಾರೆ. … Continue reading ಮುಂದಿನ ಏಪ್ರಿಲ್​ನಿಂದ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಳ್ಳೋಲ್ಲ! ಹೀಗೆಂದವರು ಯಾರು, ಏಕೆ?