ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ತೃಣಮೂಲ ಕಾಂಗ್ರೆಸ್ ಎಂಪಿ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ. ಕಲ್ಯಾಣ್ ಬ್ಯಾನರ್ಜಿ ಸ್ತ್ರೀ ದ್ವೇಷಿ ಎಂದು ಹೇಳಿದೆ.
ನಿರ್ಮಲಾ ಸೀತಾರಾಮನ್ ಅವರು ಒಂದು ವಿಷಕಾರಿ ಹಾವು ಇದ್ದಂತೆ. ದೇಶದ ಜನರನ್ನು ಬಲಿ ಪಡೆಯುತ್ತಿದ್ದಾರೆ. ಇಡೀ ಅರ್ಥ ವ್ಯವಸ್ಥೆಯನ್ನು ಭಗ್ನಗೊಳಿಸಿದ್ದಾರೆ. ಇದರಿಂದಾಗಿ ಅದೆಷ್ಟೋ ಜನರು ಮೃತಪಟ್ಟಿದ್ದಾರೆ ಎಂದು ಕಮಲ್ ಬ್ಯಾನರ್ಜಿ, ಇಂಧನ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಹೇಳಿದ್ದರು. ಅಷ್ಟೇ ಅಲ್ಲ, ನಿರ್ಮಲಾ ಸೀತಾರಾಮನ್ ಓರ್ವ ಅತ್ಯಂತ ಕಳಪೆ ಹಣಕಾಸು ಸಚಿವೆ ಎಂದೂ ಹೇಳಿದ್ದರು. ಇದನ್ನೂ ಓದಿ: ನನ್ನ ಮಗ ಶರಣಾಗದಿದ್ದರೆ ಕೊಂದು ಬಿಡಿ ಎಂದಿದ್ದ ದುಬೆ ತಾಯಿ ಈಗ ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದೇಕೆ?
ಕಲ್ಯಾಣ್ ಬ್ಯಾನರ್ಜಿ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ಕಾಳಿಯನ್ನು ಪೂಜಿಸುವ ನಾಡಿನಲ್ಲಿ ಓರ್ವ ಸ್ತ್ರೀಯ ಬಗ್ಗೆ ಇಷ್ಟು ಕೀಳಾಗಿ ಮಾತನಾಡಿದ್ದಾರೆ. ಇದು ಬರೀ ಜನಾಂಗೀಯ ನಿಂದನೆ ಮಾತ್ರವಲ್ಲ, ಸ್ತ್ರೀ ದ್ವೇಷದ ಮಾತುಗಳು ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಕೂಡ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ಕಿಡಿ ಕಾರಿದ್ದಾರೆ. ಟಿಎಂಸಿಯಲ್ಲಿ ಭ್ರಷ್ಟಾಚಾರ ಎಂಬುದು ವ್ಯಾಪಕವಾಗಿ ಹಬ್ಬಿದೆ. ಆ ಪಕ್ಷದಲ್ಲಿ ಅನೇಕರು ಮನಸಿಗೆ ಬಂದಂತೆ, ತಲೆ ಬುಡ ಇಲ್ಲದೆ ಮಾತನಾಡುತ್ತಾರೆ. ತಮ್ಮ ಹತಾಶೆಯಿಂದ ಮಾತನಾಡುತ್ತಾರೆ. ನಾವು ಅಂಥ ಹೇಳಿಕೆಗಳಿಗೆ ಸೊಪ್ಪು ಹಾಕದೆ ಇರುವುದೇ ಒಳ್ಳೆಯದು ಎಂದಿದ್ದಾರೆ. (ಏಜೆನ್ಸೀಸ್)
ಸ್ವಂತ ಖರ್ಚಿನಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿ, ಕರೊನಾ ವಾರಿಯರ್ಸ್ಗೆ ಸರ್ಕಾರದ ಸೂಚನೆ