ರಾಣೆಬೆನ್ನೂರ: ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್)ಯ ರಾಜ್ಯ ಮಟ್ಟದ ಸೇವಾ ಪ್ರಶಸ್ತಿಗೆ ನಗರದ ಆರ್.ಟಿ.ಇ.ಎಸ್ ಕಾಲೇಜ್ನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಸರಸ್ವತಿ ಬಮ್ಮನಾಳ ಆಯ್ಕೆಯಾಗಿದ್ದಾರೆ.
ಇವರು ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ರಾಜ್ಯಮಟ್ಟದ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.