ನುಹ್: ಜುಲೈ 31ರಂದು ಹರಿಯಾಣದ ನುಹ್ನಲ್ಲಿ ವಿಶ್ವ ಹಿಂದೂ ಪರಿಷತ್ ರ್ಯಾಲಿ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ಮಾಮ್ಮನ್ ಖಾನ್ರನ್ನು ನ್ಯಾಯಾಲಯ 14ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಮಾಮ್ಮನ್ ಖಾನ್ ಅವರ ವಿರುದ್ಧ ಆಗಸ್ಟ್ 1ರಂದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳು ದೂರಿನನ್ವಯ ರಾಜಸ್ಥಾನದಲ್ಲಿ ತಲೆಮಾರಿಸಿಕೊಂಡಿದ್ದ ಕಾಂಗ್ರೆಸ್ ಶಾಸಕನನ್ನು ಸಪ್ಟೆಂಬರ್ 14ರಂದು ವಶಕ್ಕೆ ಪಡೆದಿತ್ತು.
ಖಾನ್ ಅವರನ್ನು ಬಂಧಿಸಿದ ತನಿಖಾ ತಂಡದ ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ತಿಳಿಸಿದ್ದರು. ಬಳಿಕ ನ್ಯಾಯಾಲಯ ಎರಡು ದಿನ ವಶಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತ್ತು. ತನಿಖೆಗೆ ಸಹಕರಿಸುತ್ತಿಲ್ಲ ಎಂದು ಖಾನ್ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಆರೋಪಿಸಿದ್ದರು. ಅಧಿಕಾರಿಗಳ ಆರೋಪದ ಬೆನ್ನಲ್ಲೇ ನ್ಯಾಯಾಲಯ ಅವರನ್ನು 14ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.