ಶಿವಮೊಗ್ಗ: ತುಂಬು ಗರ್ಭಿಣಿ ಅವಧಿಯಲ್ಲೂ ರಜೆ ಪಡೆಯದೆ ಸೇವೆ ಸಲ್ಲಿಸುತ್ತಿರುವ ನರ್ಸ್ ರೂಪ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಫೋನ್ ಕರೆ ಮಾಡಿ ಅಭಿನಂದಿಸಿದ್ದಾರೆ.
ಅಲ್ಲದೆ ಇಂದಿನಿಂದ ರಜೆ ಪಡೆದು ವಿಶ್ರಾಂತಿಗೆ ತೆರಳುವಂತೆ ಕೂಡ ಸೂಚಿಸಿದ್ದಾರೆ.
ಇದನ್ನೂ ಓದಿ ಪರ ರಾಜ್ಯಗಳಿಂದ ಹೊತ್ತು ತಂದರು ವೈರಸ್: ಗ್ರೀನ್ ಝೋನ್ ಶಿವಮೊಗ್ಗದಲ್ಲಿ ಕರೊನಾ ಶಿಕಾರಿ!
ತೀರ್ಥಹಳ್ಳಿಯ ಶ್ರೀಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ರೂಪ ಗುತ್ತಿಗೆ ಆಧಾರದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಅವರು ಗರ್ಭಿಣಿಯಾಗಿದ್ದರೂ ರಜೆ ಪಡೆಯದೆ ಸೇವೆ ಸಲ್ಲಿಸುತ್ತಿದ್ದಾರೆ. ನಿತ್ಯ ಗಾಜನೂರು ಗ್ರಾಮದಿಂದ 60 ಕಿ.ಮೀ. ಇರುವ ತೀರ್ಥಹಳ್ಳಿಗೆ ಬಸ್ನಲ್ಲಿ ಬಂದು ಸೇವೆ ಸಲ್ಲಿಸುತ್ತಿದ್ದಾರೆ.
ರೂಪ ಅವರ ಈ ಸೇವೆಯನ್ನು ಗಮನಿಸಿದ ಸಿಎಂ ಯಡಿಯೂರಪ್ಪ ಅವರು ಖುದ್ದು ಕರೆ ಮಾಡಿ ಇಂದಿನಿಂದ ರಜೆಯುವಂತೆ ಸೂಚಿಸಿದರು. ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿದ್ದರೂ ಎಲ್ಲ ರೀತಿಯ ಸೌಲಭ್ಯ ಒದಗಿಸುವುದಾಗಿ ಅವರು ತಿಳಿಸಿದ್ದಾರೆ.