blank

ನೂತನ ದೇವಸ್ಥಾನ ಉದ್ಘಾಟನೆ ನಿಮಿತ್ತ ಧಾಮಿರ್ಕ ಕಾರ್ಯಕ್ರಮ ನ. 6ರಿಂದ

blank

ರಾಣೆಬೆನ್ನೂರ: ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನೂತನವಾಗಿ ನಿಮಿರ್ಸಿದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ, ಮೂತಿರ್ ಪ್ರತಿಷ್ಠಾಪನೆ, ಭರಮದೇವರ ಕಳಸಾರೋಹಣ ಹಾಗೂ ವಿವಿಧ ಧಾಮಿರ್ಕ ಕಾರ್ಯಕ್ರಮ ನ. 6ರಿಂದ ನ. 9ರ ವರೆಗೆ ಜರುಗಲಿವೆ.
6ರಂದು ಮಧ್ಯಾಹ್ನ 2 ಗಂಟೆಗೆ ನಗರದ ಕೆಇಬಿ ಗಣೇಶ ದೇವಸ್ಥಾನದಿಂದ ಶ್ರೀ ಆಂಜನೇಯ ಸ್ವಾಮಿ ಮೂತಿರ್ ಮೆರವಣಿಗೆ ಜರುಗಲಿದೆ. 7ರಂದು ಬೆಳಗ್ಗೆ 7 ಗಂಟೆಗೆ ಕರಗಲು ಸ್ಥಾಪನೆ ಮಾಡಲಾಗುವುದು. 8ರಂದು ಬೆಳಗ್ಗೆ ಮೂತಿರ್ ಸ್ಥಾಪನೆ, ರುದ್ರಾಭಿಷೇಕ, ದೇವಸ್ಥಾನದ ಉದ್ಘಾಟನೆ, ಮೂತಿರ್ಯ ಪ್ರಾಣ ಪ್ರತಿಷ್ಠಾಪನೆ ಜರುಗುವುದು.
ಮಧ್ಯಾಹ್ನ 12 ಗಂಟೆಗೆ ಧರ್ಮಸಭೆ ಜರುಗಲಿದ್ದು, ರಟ್ಟಿಹಳ್ಳಿಯ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಲಿಂಗದಹಳ್ಳಿ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ದೇವಸ್ಥಾನ ಸಮಿತಿಯ ಅಧ್ಯಕ್ಷ ಚಂದ್ರಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಪಾಲ್ಗೊಳ್ಳುವರು.
ನ. 6ರಿಂದ ನ. 9ರವರೆಗೆ ನಾಲ್ಕು ದಿನಗಳ ಕಾಲ ಸಂಜೆ 7 ಗಂಟೆಗೆ ಪುಟ್ಟರಾಜ್​ ಗವಾಯಿಯವರ ಶಿಷ್ಯ ಬಸವ ಶಾಸ್ತ್ರೀ ಇರಕಲ್ಲ ಅವರಿಂದ ಕೀರ್ತನ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.

Share This Article

ಇತ್ತೀಚೆಗೆ ಜನಪ್ರಿಯತೆ ಗಳಿಸುತ್ತಿರುವ ಬ್ಲೂ ಝೋನ್ ಡಯಟ್​ ಅಂದ್ರೆ ಏನು? ತೂಕ ಇಳಿಕೆಗೆ ಹೇಗೆ ಸಹಕಾರಿ? Blue Zone Diet

Blue Zone Diet : ಬ್ಲೂ ಝೋನ್ ಆಹಾರ ಪದ್ಧತಿ ಇತ್ತೀಚೆಗೆ ಭಾರಿ ಜನಪ್ರಿಯತೆ ಗಳಿಸುತ್ತಿದೆ.…

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…