ಒಡಿಸಾ: ಬಾಲಸೋರ್ ರೈಲು ದುರಂತ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆ ಒಂದು ಒಡಿಶಾದಲ್ಲಿ ನಡೆದಿದ್ದು ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಒಡಿಶಾದ ಜಜ್ಪುರ್ ಕಿಯೋಂಜರ್ ರಸ್ತೆಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!
ಭಾರಿ ಮಳೆ ಸುರಿಯುತ್ತಿದ್ದ ಕಾರಣ ಕಾರ್ಮಿಕರು ರೈಲಿನ ಬೋಗಿಗಳಡಿ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಏಕಾಏಕಿ ಚಲಿಸಿದ ಕಾರಣ ಕಾರ್ಮಿಕರು ಬೇರೆಡೆ ತೆರಳಲು ಸಾಧ್ಯವಾಗದೆ ರೈಲಿನಡಿ ಸಿಲುಕಿ ಪ್ರಾಣ ಬಿಟ್ಟಿದ್ದಾರೆ.
ಗಾಯಾಳುಗಳನ್ನು ಕಟಕ್ನಲ್ಲಿರುವ ಎಸ್ಸಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ನೆರವನ್ನು ಒದಿಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.