More

    ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗೆ ಸರಬರಾಜು ಮಾಡಿದ್ದ ಲೋಟ-ತಟ್ಟೆ ಬಿಲ್​ ಪಾಸ್​​ಗೂ ಲಂಚ ಕೇಳಿ ಸಿಕ್ಕಿಬಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ

    ಕೋಲಾರ: ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗೆ ಸರಬರಾಜು ಮಾಡಿದ್ದ ಲೋಟ-ತಟ್ಟೆಗೆ ಸಂಬಂಧಿಸಿದ ಬಿಲ್ ಪಾಸ್ ಮಾಡಲಿಕ್ಕೂ ಲಂಚ ಕೇಳಿದ ಜಿಲ್ಲಾ ಶಸ್ತ್ರಚಿಕಿತ್ಸಕ ಎಸಿಬಿ ಬಲೆಗೆ ಬಿದ್ದಿದ್ದಾನೆ.

    ಕೋಲಾರದ ಎಸ್​ಎನ್​ಆರ್​​ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಿ.ಎಸ್​. ರವಿಕುಮಾರ್ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಚೇರಿಯಲ್ಲೇ 25 ಸಾವಿರ ರೂಪಾಯಿ ಪಡೆಯುವಾಗ ಸಿಕ್ಕಿಹಾಕಿಕೊಂಡಿದ್ದಾನೆ.

    ಇದನ್ನೂ ಓದಿ: ‘ಆರ್​ಆರ್​ಆರ್​’ ನಡುವೆ ತೂರಲೆತ್ನಿಸಿದ ‘ನಟ ಭಯಂಕರ’; ಕೊನೆಗೂ ಬೇಡ ಎಂದು ಸುಮ್ಮನಾದ್ನಂತೆ ‘ಒಳ್ಳೇ ಹುಡುಗ’!

    ಕೋವಿಡ್​ ಸಂದರ್ಭದಲ್ಲಿ ಕಿರಣ್​ಕುಮಾರ್ ಎಂಬವರು ಆಸ್ಪತ್ರೆಗೆ ಲೋಟ-ತಟ್ಟೆ ಸರಬರಾಜು ಮಾಡಿದ್ದರು. ಆದರೆ ಬಿಲ್ ಪಾಸ್​ ಮಾಡಲು 25 ಸಾವಿರ ರೂಪಾಯಿ ಲಂಚ ಕೇಳಿದ್ದ. ಈ ಬಗ್ಗೆ ಕಿರಣ್​ಕುಮಾರ್​ ಎಸಿಬಿಗೆ ತಿಳಿಸಿದ್ದರು. ಎಸಿಬಿ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

    ಸ್ನಾನಕ್ಕೆ ಹೋಗಿದ್ದವನನ್ನು ಹಾಗೇ ಠಾಣೆಗೆ ಕರೆದೊಯ್ದ ಪೊಲೀಸರು; ಪಕ್ಕದ ಮನೆಯವರ ಜತೆ ಜಗಳವಾಡಿದ್ದ ರೌಡಿಶೀಟರ್​ ಮರ್ಯಾದೆ ಬೀದಿಪಾಲು

    ಮೂರು ವರ್ಷದ ಅವಳಿ ಮಕ್ಕಳ ಸಾವಿನ ಬೆನ್ನಿಗೆ ತಾಯಿಯೂ ನಿಧನ; ತಂದೆ ಇನ್ನೂ ಆಸ್ಪತ್ರೆಯಲ್ಲಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts