ಲಕ್ನೋ: ಲಾಕ್ಡೌನ್ ಹಿನ್ನೆಲೆಯಲ್ಲಿ ಸಮಸ್ಯೆಯಲ್ಲಿ ಸಿಲುಕಿರುವ ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 15 ಕೋಟಿ ರೂ. ಆರಂಭಿಕ ಕಂತನ್ನು ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ಗೆ ಪಾವತಿಸಿದರು.
ಲಾಕ್ಡೌನ್ ನಂತರ ಸಣ್ಣ ಕೈಗಾರಿಕೆಗಳು ಆರಂಭವಾಗಲು ಆರ್ಥಿಕ ತೊಂದರೆ ಎದುರಾಗಿದೆ. ತೊಂದರೆ ನಿವಾರಣೆಗೆ ಈ ಹಣ ಬಳಸಿಕೊಂಡು ಸಣ್ಣ ಕೈಗಾರಿಕೆಗಳನ್ನು ಆರಂಭಿಸಬಹುದು ಎಂದು ಅವರು ಹೇಳಿದರು.
ಇದನ್ನೂ ಓದಿ ಭಾರತ, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸಿದ ಅಂಫಾನ್ ಚಂಡಮಾರುತ: ಭಾರಿ ಮಳೆ, ಗಾಳಿ
ಉದ್ಯೋಗ ಸೃಷ್ಟಿಗಾಗಿ ರಾಜ್ಯ ಸರ್ಕಾರ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಜತೆ ಒಪ್ಪಂದ ಮಾಡಿಕೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್ಗೆ ಮೊದಲ ಕಂತಿನ ಹಣ ಪಾವತಿ ಮಾಡಲಾಗಿದೆ ಎಂದರು.
ಲಾಕ್ಡೌನ್ ನಂತರ ಅಧಿಕ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಆಗಮಿಸಿದ್ದಾರೆ. ವಲಸೆ ಕಾರ್ಮಿಕರ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ಕಲ್ಪಿಸಲು ಸರ್ಕಾರ ಚಿಂತಿಸುತ್ತಿದೆ.
ಇದನ್ನೂ ಓದಿ Fact Check| ಆರು ವರ್ಷದ ಹಳೆಯ ಫೋಟೋ ಲಾಕ್ಡೌನ್ ಸಮಯದಲ್ಲಿ ಸಂಚಲನ ಸೃಷ್ಟಿಸಿತು!
ಸಣ್ಣ ಕೈಗಾರಿಕೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಜತೆ ರಾಜ್ಯ ಸರ್ಕಾರ ಕೂಡ ಪ್ಯಾಕೇಜ್ ನೀಡುತ್ತಿದೆ. ಎರಡು ಪ್ಯಾಕೇಜ್ಗಳನ್ನು ಸಣ್ಣ ಕೈಗಾರಿಕೋದ್ಯಮಿಗಳಿಗೆ ತಲುಪಿಸಲು ಸಾಲ ಮೇಳ ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಜತೆ ಮಾಡಿಕೊಂಡಿರುವ ಒಪ್ಪಂದದಿಂದ ಸ್ಟಾರ್ಟ್ಅಪ್ಗಳ ವೇಗ ಅಧಿಕಗೊಳ್ಳುತ್ತದೆ ಎಂದು ಇದೇ ವೇಳೆ ಉಪ ಮುಖ್ಯಮಂತ್ರಿ ದಿನೇಶ್ಶರ್ಮಾ ಹೇಳಿದರು.
ಈ ಒಪ್ಪಂದ ಹೆಚ್ಚು ಮಂದಿ ಯುವಕರಿಗೆ ಉದ್ಯೋಗ ಒದಗಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. (ಏಜೆನ್ಸೀಸ್)