ಚಿಕ್ಕಮಗಳೂರು: ಒಕ್ಕಲಿಗರ ಸಂಘದಿಂದ ವಿಶ್ವವಿದ್ಯಾಲಯ ಆರಂಭಿಸುವ ಚಿಂತನೆ ಇದೆ. ಮಂಡ್ಯದಲ್ಲಿ ನರ್ಸಿಂಗ್ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶ್ರೀಗಂಧ ಕಾವಲ್ನಲ್ಲಿ ಆಯುರ್ವೇದಿಕ್ ಕಾಲೇಜು ಮಂಜೂರಾಗಿದ್ದು, ಶೀಘ್ರವೇ ಆರಂಭಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎನ್.ಬಾಲಕೃಷ್ಣ, ನರ್ಸಿಂಗ್ ಕಾಲೇಜು ಮತ್ತು ಬಿಐಟಿ ವಿದ್ಯಾರ್ಥಿನಿಯರಿಗೆ 25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗುವುದು. ಚಿಕ್ಕಬಳ್ಳಾಪುರ, ಹಾಸನ, ತುಮಕೂರು, ಚನ್ನಪಟ್ಟಣದಲ್ಲಿ ಬಡ ಒಕ್ಕಲಿಗ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಆರಂಭಿಸಲಾಗುತ್ತಿದೆ ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಒಕ್ಕಲಿಗ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ವಿದ್ಯಾರ್ಥಿ ನಿಲಯ ನಿರ್ಮಿಸಲಾಗುವುದು. ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಂಘದಿಂದ ಜಿಲ್ಲಾ ಕೇಂದ್ರಗಳಿಗೆ ತಲಾ 1 ಲಕ್ಷ ಹಾಗೂ ತಾಲೂಕು ಕೇಂದ್ರಗಳಿಗೆ ತಲಾ 25 ಸಾವಿರ ರೂ. ನೀಡಲಾಗುವುದು ಎಂದರು.
ಒಕ್ಕಲಿಗರ ಸಂಘ 5 ಲಕ್ಷ ಸದಸ್ಯರನ್ನು ಹೊಂದಿದೆ. ಹೊಸ ಸದಸ್ಯತ್ವಕ್ಕೆ 15 ರಿಂದ 20 ದಿನಗಳಲ್ಲಿ ಅರ್ಜಿ ಆಹ್ವಾನಿಸಲಾಗುವುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಒಕ್ಕಲಿಗರ ಸಂಘದ ಮುಖಂಡರಾದ ಪೂರ್ಣೇಶ್, ಎಂ.ಸಿ.ಅಶೋಕ್ ಇದ್ದರು.
ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ… ಎನ್ನುತ್ತಲೇ ಇಂದು ನಡೆಯಬೇಕಿದ್ದ ಬಹುನಿರೀಕ್ಷಿತ ಕಾರ್ಯವನ್ನು ಮುಂದೂಡಿದ ಎಚ್ಡಿಕೆ!