ಚಿಕ್ಕಮಗಳೂರು: ಕೆಲವು ತಿಂಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ವೃದ್ಧೆಯೊಬ್ಬರು ಭಿಕ್ಷೆ ಬೇಡಿ ಉಳಿಸಿದ್ದ ಒಂದು ಲಕ್ಷ ರೂಪಾಯಿಯನ್ನು ದೇವಸ್ಥಾನದ ಅನ್ನದಾನಕ್ಕಾಗಿ ಕೊಟ್ಟು ರಾಜ್ಯದ ಗಮನ ಸೆಳೆದಿದ್ದರು. ಅದೇ ರೀತಿ ಮತ್ತೊಬ್ಬ ವೃದ್ಧೆ ದೇವತಾ ಕಾರ್ಯಕ್ಕೆ ನೀಡಿದ್ದಾರೆ.
ಅಂದರೆ ಆಂಜನೇಯ ಸ್ವಾಮಿಯ ಬೆಳ್ಳಿ ಮುಖವಾಡಕ್ಕಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ದೇವಸ್ಥಾನಕ್ಕೆ ಈ ಅಜ್ಜಿ ಹಣ ನೀಡಿದ್ದಾರೆ. ಕೆಂಪಜ್ಜಿ ಎಂಬ ಈಕೆ ಭಿಕ್ಷೆ ಬೇಡಿ ದೇವತಾ ಕಾರ್ಯಕ್ಕೆ 10 ಸಾವಿರ ರೂಪಾಯಿ ನೀಡಿದ್ದಾರೆ. ಈ ಹಿಂದೆ ಅಂದರೆ 2019ರಲ್ಲೂ ಇವರು ಇದೇ ದೇವಸ್ಥಾನಕ್ಕೆ ಭಿಕ್ಷೆ ಬೇಡಿ ಹತ್ತು ಸಾವಿರ ರೂಪಾಯಿ ಕೊಟ್ಟಿದ್ದರು.
ಇದನ್ನೂ ಓದಿ: ಮುದ್ದಾದ ಗಂಡು ಮಗುವಿಗೆ ಜನ್ಮವಿತ್ತ ಮೂರೇ ದಿನಕ್ಕೆ ಅಮ್ಮ ಇನ್ನಿಲ್ಲ; ಸಿಜೇರಿಯನ್ ಮಾಡಿದ ವೈದ್ಯರ ನಿರ್ಲಕ್ಷ್ಯ ಎಂದು ಪಾಲಕರ ಆರೋಪ
ಇದೇ ವರ್ಷದ ಫೆಬ್ರವರಿ ತಿಂಗಳಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಅಶ್ವತ್ಥಮ್ಮ ಎಂಬವರು ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಅನ್ನದಾನಕ್ಕಾಗಿ ಒಂದು ಲಕ್ಷ ರೂಪಾಯಿ ನೀಡಿದ್ದರು. ಇಷ್ಟೊಂದು ಮೊತ್ತವನ್ನು ಅವರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಂಡು ಉಳಿಸಿಟ್ಟ ಹಣವನ್ನು ಒಟ್ಟುಗೂಡಿಸಿ ನೀಡಿದ್ದರು ಎಂಬುದು ವಿಶೇಷ.
ಮುದ್ದಾದ ಗಂಡು ಮಗುವಿಗೆ ಜನ್ಮವಿತ್ತ ಮೂರೇ ದಿನಕ್ಕೆ ಅಮ್ಮ ಇನ್ನಿಲ್ಲ; ಸಿಜೇರಿಯನ್ ಮಾಡಿದ ವೈದ್ಯರ ನಿರ್ಲಕ್ಷ್ಯ ಎಂದು ಪಾಲಕರ ಆರೋಪ
ಇಲ್ಲಿ ರಾತ್ರಿ ಯಾರು ಬೇಕಾದರೂ ನಿರಾತಂಕವಾಗಿ ಸಂಚರಿಸಬಹುದು; ನೈಟ್ ವಾಕ್ಗೆ ಇದು ಜಗತ್ತಿನಲ್ಲೇ ಅತ್ಯಂತ ಸುರಕ್ಷಿತ!