ನವದೆಹಲಿ : ಭಾರತದ ಸ್ವಾತಂತ್ರ್ಯದಿನದ ಅಮೃತ ಮಹೋತ್ಸವದ ಸಂದರ್ಭಕ್ಕೆ ನಾಳೆ (ಆಗಸ್ಟ್ 15) ಬೆಳಿಗ್ಗೆ 7 ಗಂಟೆಗೆ ದೆಹಲಿಯ ಕೆಂಪುಕೋಟೆಯ ಆವರಣದಲ್ಲಿ ಪಾರಂಪರಿಕ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ.
ಬೆಳಿಗ್ಗೆ 7.30ಕ್ಕೆ ಪ್ರಧಾನಿ ಮೋದಿ ದೇಶವನ್ನು ಕುರಿತು ಮಾತನಾಡಲಿದ್ದಾರೆ. ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದಿರುವ 32 ಕ್ರೀಡಾಪಟುಗಳು ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಜಾವಲಿನ್ ಎಸೆತದಲ್ಲಿ ಸ್ವರ್ಣ ಪದಕ ಗೆದ್ದ ಸುಬೇದಾರ್ ನೀರಜ್ ಚೋಪ್ರ, ಪುರುಷರ ಹಾಕಿ ತಂಡದ ಸದಸ್ಯರು ಸೇರಿದಂತೆ ಪದಕ ಗೆದ್ದ ಇತರ ಕ್ರೀಡಾಪಟುಗಳು ಪಾಲ್ಗೊಳ್ಳುವರು.
ಇದನ್ನೂ ಓದಿ: ಆಗಸ್ಟ್ 15: ಭಾರತದ ಜೊತೆ ಈ ದೇಶಗಳಿಗೂ ‘ರಾಷ್ಟ್ರೀಯ ದಿನ’
ಕರೊನಾ ಸಂಬಂಧಿತ ಕಟ್ಟುಪಾಡುಗಳ ನಡುವೆಯೂ “ಆಜಾದಿ ಕಾ ಅಮೃತ್ ಮಹೋತ್ಸವ್”ನ ಆಚರಣೆಗೆ ಹಲವು ಸಿದ್ಧತೆಗಳು ನಡೆದಿವೆ. ಈ ವಿಶೇಷ ಸಂದರ್ಭದ ದೃಶ್ಯಾವಳಿಗಳನ್ನು ಡಿಡಿ ನ್ಯೂಸ್ ಮತ್ತು ಸರ್ಕಾರದ ಯೂಟ್ಯೂಬ್ ಚ್ಯಾನೆಲ್ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ. (ಏಜೆನ್ಸೀಸ್)
ಒಲಿಂಪಿಕ್ ಕ್ರೀಡಾಪಟುಗಳ ಸಾಧನೆ ಐತಿಹಾಸಿಕ! 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್