ತಿರುಪತಿ: ಪ್ರಭಾಸ್, ಕೃತಿ ಸನೊನ್, ಸೈಫ್ ಅಲಿ ಖಾನ್ ನಟನೆಯ ಬಹು ನಿರೀಕ್ಷಿತ ಆದಿ ಪುರುಷ್ ಸಿನಿಮಾದ ಪ್ರೀ ರಿಲೀಸ್ ಇವೆಂಟ್ಗೆ ಭರ್ಜರಿ ರೆಸ್ಪಾನ್ಸ್ ದೊರೆತ್ತಿದ್ದು, ಚಿತ್ರತಂಡವು ಅಂತಿಮ ಟ್ರೈಲರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳನ್ನು ಖುಷಿ ಪಡಿಸಿದೆ.
ಬುಧವಾರ ಚಿತ್ರದ ನಿರ್ದೇಶಕ ಓಂ ರಾವತ್ ಹಾಗೂ ನಾಯಕಿ ಕೃತಿ ಸನೊನ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಆಧರೆ, ದೇವಸ್ಥಾನದ ಆವರಣದಲ್ಲಿ ಮಾಡಿದ ಆ ಒಂದು ಕೆಲಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.
ದೇವಸ್ಥಾನದಲ್ಲಿ ಚುಂಬನ
ಆದಿಪುರುಷ್ ಚಿತ್ರತಂಡವು ಮಂಗಳವಾರ ನಡೆದ ಪ್ರೀ ರಿಲೀಸ್ ಇವೆಂಟ್ನಲ್ಲಿ ಸಿನಿಮಾದ ಅಂತಿಮ ಟ್ರೈಲರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಜೋಶ್ ಅನ್ನು ಮತ್ತಷ್ಟು ಹೆಚ್ಚಿಸಿದೆ. ಚಿತ್ರತಂಡವು ಬುಧವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ: ಮೀಸಲಾತಿ ಹೆಚ್ಚಳ, ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ
ದೇವಸ್ಥಾನದಿಂದ ಹೊರಬಂದ ಬಳಿಕ ನಾಯಕಿ ಕೃತಿ ಸನೋನ್ ಅವರನ್ನು ಕಳುಹಿಸಿ ಕೊಡುವ ವೇಳೆ ನಿರ್ದೇಶಕ ಓಂ ರಾವತ್ ಅವರ ಕೆನ್ನೆಗೆ ಮುತ್ತು ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಕುರಿತು ಆಂಧ್ರಪ್ರದೇಶ ಬಿಜೆಪಿ ಕಾರ್ಯದರ್ಶಿ ರಮೇಶ್ ನಾಯ್ಡು ನಗೋತು ಮೊದಲಿಗೆ ಟ್ವೀಟ್ ಮಾಡಿ ಆ ನಂತರ ಡಿಲೀಟ್ ಮಾಡಿದ್ಧಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ನೆಟ್ಟಿಗರು, ಭಕ್ತರು ಚಿತ್ರತಂಡದ ಸದಸ್ಯರ ವರ್ತನೆಗೆ ಕಿಡಿಕಾರಿದ್ದು ಇದು ಶೋಭೆ ತರುವಂತದ್ದಲ್ಲ ಎಂದು ಹರಿಹಾಯ್ದಿದ್ಧಾರೆ.