ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಚನ್ನಪೇಟನಲ್ಲಿ ಓಂ ಯೂಥ್ ಗ್ರೂಪ್ ವತಿಯಿಂದ ಆಯೋಜಿಸಿದ್ದ ದಸರಾ ಉತ್ಸವಕ್ಕೆ ಸಂತೋಷ ಲಾಡ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಲಾಡ್, ಎಸ್ಎಸ್ಕೆ ಸಮಾಜ ಅನೇಕ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಳಕಳಿಯ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಎಸ್ಎಸ್ಕೆ ಸಮಾಜ ತನ್ನದೇ ಆದ ಸಾಂಸ್ಕೃತಿಕತೆ, ಪರಂಪರೆ ಹೊಂದಿದೆ ಎಂದರು.
ಎಸ್ಎಸ್ಕೆ ಸಮಾಜದ ಮಹಿಳೆಯರು ಮತ್ತು ಯುವಕರು ಇದೇ ಸಂದರ್ಭದಲ್ಲಿ ದಾಂಡಿಯಾ ನೃತ್ಯವನ್ನಾಡಿದರು.
ಸಮಾಜದ ಧರ್ಮದರ್ಶಿ ಸತೀಶ ಮೆಹರವಾಡೆ, ಹá-ಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಹಾಗೂ ಇತರರು ಉಪಸ್ಥಿತರಿದ್ದರು.