More

    ಒಮಿಕ್ರಾನ್​ ಸೋಂಕು ಹರಡುವಿಕೆ ಡೆಲ್ಟಾಗಿಂತ 3 ಪಟ್ಟು ಅಧಿಕ; ಜಿಲ್ಲಾಮಟ್ಟದಲ್ಲೇ ಜಾಗ್ರತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

    ನವದೆಹಲಿ: ಒಮಿಕ್ರಾನ್ ಅಪಾಯಕಾರಿಯಲ್ಲ ಎಂದು ಹೇಳಲಾಗುತ್ತಿದ್ದ ಸನ್ನಿವೇಶ ಇದೀಗ ಬದಲಾಗಿದ್ದು, ಒಮಿಕ್ರಾನ್​ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸುವ ಎಚ್ಚರಿಕೆಯ ಸಲಹೆ-ಕಿವಿಮಾತುಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ.

    ದಿನೇದಿನೆ ಒಮಿಕ್ರಾನ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಸೋಂಕು ಕಾಣಿಸಿಕೊಂಡಿರುವ ದೇಶಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ರಾಜ್ಯದಲ್ಲೂ ಕಳೆದ ಕೆಲವು ದಿನಗಳಿಂದ ಒಮಿಕ್ರಾನ್​ ತೀವ್ರಗತಿಯಲ್ಲಿ ಹರಡುತ್ತಿದೆ. ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಹರಡುತ್ತಿರುವ ಒಮಿಕ್ರಾನ್​, ನಿನ್ನೆಯಷ್ಟೇ ಉಡುಪಿ ಜಿಲ್ಲೆಗೂ ಪ್ರವೇಶಿಸಿದೆ.

    ಇಂದು ಒಮಿಕ್ರಾನ್ ಕುರಿತಂತೆ ಕೇಂದ್ರ ಮತ್ತಷ್ಟು ಎಚ್ಚೆತ್ತಿದ್ದು, ಎಲ್ಲ ರಾಜ್ಯಗಳಿಗೂ ಮುಂಜಾಗ್ರತೆ ವಹಿಸುವಂತೆ ವಿಶೇಷವಾಗಿ ಸೂಚನೆ ನೀಡಿದೆ. ಈ ಹಿಂದೆಯೇ ಕಾಣಿಸಿಕೊಂಡಿರುವ ಕರೊನಾ ರೂಪಾಂತರಿ ವೈರಸ್​ ಡೆಲ್ಟಾಗಿಂತಲೂ ಒಮಿಕ್ರಾನ್ ಮೂರು ಪಟ್ಟು ಹೆಚ್ಚು ಹರಡಬಲ್ಲದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆಯನ್ನು ನೀಡಿದೆ.

    ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗೆ ಸರಬರಾಜು ಮಾಡಿದ್ದ ಲೋಟ-ತಟ್ಟೆ ಬಿಲ್​ ಪಾಸ್​​ಗೂ ಲಂಚ ಕೇಳಿ ಸಿಕ್ಕಿಬಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ

    ಮಾತ್ರವಲ್ಲ, ಜಿಲ್ಲಾಮಟ್ಟದಲ್ಲೇ ಕೋವಿಡ್/ಒಮಿಕ್ರಾನ್​ ಬಗ್ಗೆ ಹೆಚ್ಚಿನ ಗಮನವಹಿಸಿ. ಅಲ್ಲದೆ, ಪರಿಸ್ಥಿತಿ ಬಿಗಡಾಯಿಸಿದರೆ ಅಗತ್ಯ ಬೀಳುವ ಔಷಧ, ವೈದ್ಯಕೀಯ ಪರಿಕರ, ಆಸ್ಪತ್ರೆ ವ್ಯವಸ್ಥೆ, ಸಿಬ್ಬಂದಿ ಲಭ್ಯತೆ ಎಲ್ಲವುಗಳ ಬಗ್ಗೆ ನಿಗಾ ಇರಿಸಿ ಸೂಕ್ತ ವ್ಯವಸ್ಥೆ ಮಾಡಿಟ್ಟುಕೊಂಡಿರಿ ಎಂಬುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್​ ಭೂಷಣ್​ ಎಲ್ಲ ರಾಜ್ಯಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.

    ಇದನ್ನೂ ಓದಿ: ಮುಖ್ಯಮಂತ್ರಿಗೇ ಶಾಪ ಹಾಕಿದ ಸ್ವಾಮೀಜಿ: ಒಂದೇ ತಿಂಗಳಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಂತೆ ಬೊಮ್ಮಾಯಿ!

    ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಸದ್ಯ ಭಾರತದಲ್ಲಿ 200 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಜಾಸ್ತಿ ಪ್ರಕರಣಗಳು ಕಂಡುಬಂದಿವೆ.

    ಮೂರು ವರ್ಷದ ಅವಳಿ ಮಕ್ಕಳ ಸಾವಿನ ಬೆನ್ನಿಗೆ ತಾಯಿಯೂ ನಿಧನ; ತಂದೆ ಇನ್ನೂ ಆಸ್ಪತ್ರೆಯಲ್ಲಿ…

    ಸ್ನಾನಕ್ಕೆ ಹೋಗಿದ್ದವನನ್ನು ಹಾಗೇ ಠಾಣೆಗೆ ಕರೆದೊಯ್ದ ಪೊಲೀಸರು; ಪಕ್ಕದ ಮನೆಯವರ ಜತೆ ಜಗಳವಾಡಿದ್ದ ರೌಡಿಶೀಟರ್​ ಮರ್ಯಾದೆ ಬೀದಿಪಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts