ನವದೆಹಲಿ: ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬಳ ಮೇಲೆ ಕೈ ಮಾಡಿ ಆಕೆಯ ಸೀರೆಯನ್ನು ಎಳೆದಿರುವ ಮನಕದಡುವ ವಿಡಿಯೋ ಉತ್ತರ ಪ್ರದೇಶದಲ್ಲಿಂದು ಬೆಳಕಿಗೆ ಬಂದಿದೆ. ಸ್ಥಳೀಯ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮಹಿಳೆಯ ಮೇಲೆ ದಾಳಿ ನಡೆಸಿದವರು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಾರ್ಟಿಯ ಬೆಂಬಲಿಗರೆಂದು ಹೇಳಲಾಗಿದೆ. ಬ್ಲಾಕ್ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆಗೆ ಆಕೆಯು ಸಹ ನಾಮಪತ್ರ ಸಲ್ಲಿಸಲು ಬಂದಿದ್ದಳು ಎಂದು ವರದಿಯಾಗಿದೆ.
ಈ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 130 ಕಿ.ಮೀ ದೂರದಲ್ಲಿರುವ ಲಖಿಂಪುರ್ ಖೇರಿಯಲ್ಲಿ ನಡೆದಿದೆ. ಇಂದು ಉತ್ತರ ಪ್ರದೇಶದ ಅನೇಕ ಪ್ರದೇಶಗಲ್ಲಿ ಒಂದು ಡಜನ್ಗೂ ಅಧಿಕ ಗಲಾಟೆಗಳು ನಡೆದಿವೆ ಎಂದು ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಎಂಬುವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
825 ಬ್ಲಾಕ್ ಪ್ರಮುಖ್ ಅಥವಾ ಸ್ಥಳೀಯ ಪಂಚಾಯತ್ ಮುಖಂಡರಿಗೆ ಶನಿವಾರ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಆದರೆ 14 ಪ್ರದೇಶಗಳಿಂದ ಹಿಂಸಾಚಾರ ವರದಿಯಾಗಿದೆ ಎಂದು ಪ್ರಶಾಂತ್ ಕುಮಾರ್ ಹೇಳಿದರು.
ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬಹುತೇಕ ಸ್ಥಾನಗಳಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು. (ಏಜೆನ್ಸೀಸ್)
ಕರ್ನಾಟಕದ ‘ಸಿಂಗಂ’ ಕೆ. ಅಣ್ಣಾಮಲೈ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ
ಜನ ಕೇಳುವ ಪ್ರಶ್ನೆಗೆ ಉತ್ತರಿಸಲು ಇರಿಸುಮುರಿಸು: ನೋವಿನಿಂದಲೇ ಮಹಿಳಾ ಎಸ್ಐ ಆತ್ಮಹತ್ಯೆ!