ಹುಬ್ಬಳ್ಳಿ: ಇತ್ತೀಚೆಗೆ ಯುವಕರು, ಕಟ್ಟುಮಸ್ತಾಗಿರುವವರು, ನಿಯಮಿತವಾಗಿ ಕಸರತ್ತು ನಡೆಸುತ್ತಿರುವವರು ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆತಂಕವನ್ನು ಮೂಡಿಸಿದೆ. ಈ ನಡುವೆ ಕರ್ತವ್ಯನಿರತ ಯೋಧರೊಬ್ಬರೂ ಹೃದಯಾಘಾತಕ್ಕೆ ಬಲಿಯಾದ ಪ್ರಕರಣವೊಂದು ನಡೆದಿದೆ.
ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಗಂಗಾಧರಯ್ಯ ಹಿರೇಮಠ (49) ಹೃದಯಾಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡ ಸೈನಿಕ. ಇವರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಿಎಸ್ಎಫ್ ಬೆಟಾಲಿಯನ್ 138ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು 28 ವರ್ಷಗಳ ಹಿಂದೆಯೇ ದೇಶ ಕಾಯುವ ಕಾಯಕಕ್ಕೆ ಸೇರಿದ್ದರು. ಆದರೆ ಇವರು ಪಶ್ಚಿಮಬಂಗಾಳದ್ ಕುಚ್ ಬಿಹಾರ್ನಲ್ಲಿ ಕರ್ತವ್ಯನಿರತರಾಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಇಂದು ರಾತ್ರಿ ಸ್ವಗ್ರಾಮ ರೊಟ್ಟಿಗವಾಡಕ್ಕೆ ಇವರ ಪಾರ್ಥಿವ ಶರೀರ ತಲುಪುವ ನಿರೀಕ್ಷೆ ಇದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಸೈನಿಕ ಗಂಗಾಧರಯ್ಯ ಅವರ ಅಂತ್ಯಕ್ರಿಯೆ ನಡೆಸಲು ತಾಲೂಕು ಆಡಳಿತ ಸಜ್ಜಾಗುತ್ತಿದೆ.
‘ಗರ್ಲ್ ನಂ. 166’ ಗ್ರೇಟ್ ಎಸ್ಕೇಪ್: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!