More

    ನ.5 ರಂದು ಹೂಗಾರ ಮಾದಯ್ಯ ಜಯಂತಿ; ಪ್ರತಿಭಾ ಪುರಸ್ಕಾರ

    ಲಿಂಗಸುಗೂರು: ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನ.5 ರಂದು ಹೂಗಾರ ಮಾದಯ್ಯ ಜಯಂತ್ಯೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಹೂಗಾರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಹೂಗಾರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಹೂಗಾರ ಹೇಳಿದರು.

    ಇದನ್ನೂ ಓದಿ: ವೀರಶೈವ ಮಹಾಸಭಾದಿಂದ ಸನ್ಮಾನ,ಪ್ರತಿಭಾ ಪುರಸ್ಕಾರ

    ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದರು. ನ.1ರಂದು ಬೆಳಗ್ಗೆ ಸೋಮವಾರಪೇಟೆ ಮಠದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಶರಣ ಹೂಗಾರ ಮಾದಯ್ಯನವರ ಭಾವಚಿತ್ರ ಮೆರವಣಿಗೆ ನಡೆಯಲಿದೆ.

    ಸಮಾವೇಶದಲ್ಲಿ ಸಾವಿರ ದೇವರ ಸಂಸ್ಥಾನ ಮಠದ ಶಾಂತಮಲ್ಲ ಶಿವಾಚಾರ್ಯರು, ಸೋಮವಾರ ಪೇಟೆ ಹಿರೇಮಠದ ಅಭಿನವ ರಾಚೋಟಿ ಶಿವಾಚಾರ್ಯರು, ಮಂಗಳವಾರ ಪೇಟೆ ಹಿರೇಮಠದ ವೀರಸಂಗಮೇಶ್ವರ ಶಿವಾಚಾರ್ಯರು, ಕಲ್ಲಂಗೇರಾ ಬಸವರಾಜಪ್ಪ ತಾತನವರು,

    ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಹೂಗಾರ, ಶಾಸಕರಾದ ಡಾ.ಶಿವರಾಜ ಪಾಟೀಲ್,

    ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಮಾನಪ್ಪ ವಜ್ಜಲ್, ಬಸನಗೌಡ ತುರ್ವಿಹಾಳ, ಜಿ.ಕರೆಮ್ಮ, ಎಂಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಪುರ ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದರು. ಸಂಘದ ತಾಲೂಕು ಅಧ್ಯಕ್ಷ ಮಲ್ಲಪ್ಪ ಹೂಗಾರ, ಮಹಾಂತೇಶ ಹೂಗಾರ, ಮಂಜುನಾಥ ಹೂಗಾರ, ವೆಂಕಟೇಶ ಹೂಗಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts