More

    ಮೊದಲ ದಿನ 20ಕ್ಕೂ ಅಧಿಕ ಮಂದಿಗೆ ಗೃಹಲಕ್ಷ್ಮೀ ಯೋಜನೆ ಮಂಜೂರಾತಿ

    ಬಾಳೆಹೊನ್ನೂರು: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುರುವಾರ ಬಿ.ಕಣಬೂರು ಗ್ರಾಪಂನ ಬಾಪೂಜಿ ಸೇವಾ ಕೇಂದ್ರದಲ್ಲಿ ಮಂಜೂರಾತಿ ಆದೇಶ ಪತ್ರ ವಿತರಿಸಲಾಯಿತು.

    ಯೋಜನೆಗೆ ನೋಂದಣಿ ಸಂದೇಶ ಬಂದು ಗ್ರಾಪಂ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡ ಮನೆಯೊಡತಿಗೆ ಸ್ಥಳದಲ್ಲೇ ಮಂಜೂರಾತಿ ಆದೇಶ ಪತ್ರ ನೀಡಲಾಯಿತು. ಗ್ರಾಪಂ ಬಾಪೂಜಿ ಸೇವಾ ಕೇಂದ್ರದಲ್ಲಿ ಮೊದಲ ದಿನ 20ಕ್ಕೂ ಅಧಿಕ ಫಲಾನುಭವಿ ಮಹಿಳೆಯರಿಗೆ ನೋಂದಣಿ ಆದೇಶ ಪತ್ರ ವಿತರಿಸಲಾಯಿತು.
    ಯೋಜನೆ ಕುರಿತು ಪಿಡಿಒ ಕಾಶಪ್ಪ ಮಾತನಾಡಿ, ಬಿಪಿಎಲ್ ಕಾರ್ಡ್‌ನಲ್ಲಿರುವ ಯಜಮಾನಿಯ ಮೊಬೈಲ್ ಸಂಖ್ಯೆಗೆ ನೋಂದಣಿ ಸಂದೇಶ ಬರಲಿದ್ದು, ಅಂಥವರು ಸಂಬಂಧಿಸಿದ ಸೇವಾ ಕೇಂದ್ರಕ್ಕೆ ತೆರಳಿ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
    ಬಿ.ಕಣಬೂರು ಗ್ರಾಪಂ ಅಧ್ಯಕ್ಷೆ ಜಾನಕಿ, ಉಪಾಧ್ಯಕ್ಷ ಇಬ್ರಾಹಿಂ ಶಾಫಿ, ಸದಸ್ಯರಾದ ಬಿ.ಕೆ.ಮಧುಸೂದನ್, ಸದಾಶಿವ, ಶೇಖರ್, ಯು.ಅಶ್ರಫ್, ಮಾಜಿ ಅಧ್ಯಕ್ಷ ಜಾನ್ ಡಿಸೋಜಾ, ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಸಂಪೂರ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts