ಬೆಂಗಳೂರು: ಕನ್ನಡದ ವರನಟ ಡಾ.ರಾಜಕುಮಾರ್ ಅವರ 96ನೇ ಜನ್ಮದಿನಾಚರಣೆ ಅಂಗವಾಗಿ ರವೀಂದ್ರ ಕಲಾ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಬುಧವಾರ ಬೆಳಗ್ಗೆ 11ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಶ್ರೀನಿವಾಸ ಮೂರ್ತಿ, ನಿರ್ದೇಶಕ ಪಿ.ಶೇಷಾದ್ರಿ, ಹಿರಿಯ ಕಲಾವಿದ ಹಾಗೂ ಡಾ.ರಾಜ ಪುತ್ರ ರಾಘವೇಂದ್ರ ರಾಜಕುಮಾರ್ ಪಾಲ್ಗೊಳ್ಳಲಿದ್ದಾರೆ.
ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕಂಬದರಂಗಯ್ಯ ಹಾಗೂ ತಂಡದವರಿಂದ ಡಾ.ರಾಜಕುಮಾರ್ ಚಿತ್ರಗಳ ಗೀತ ಗಾಯನ ನಡೆಯಿಲಿದೆ.