More

    ಸಾಂಸಾರಿಕ ಜಂಜಡಕ್ಕೆ ಬೇಸತ್ತು ನದಿಗೆ ಹಾರಿ ಪ್ರಾಣ ಕಳೆದುಕೊಂಡ!

    ವಿಜಯಪುರ: ರಾಜ್ಯದಲ್ಲಿ ಕೆಲವು ದಿನಗಳಿಂದ ಕೇಳಿ ಬರುತ್ತಿರುವ ಆತ್ಮಹತ್ಯೆ ಪ್ರಕರಣಗಳ ಸರಣಿ ಇನ್ನೂ ಮುಂದುವರಿದಿದ್ದು, ಹೊಸದಾಗಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ.
    ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ದೇವಣಗಾಂವ ನಿವಾಸಿ ಸಿದ್ದಪ್ಪ ಅಳ್ಳಗಿ ಮೃತಪಟ್ಟ ವ್ಯಕ್ತಿ.

    ಈತ ಕೌಟುಂಬಿಕ ಕಲಹ ಕಾರಣಕ್ಕೆ ಆತ್ಯಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸಂಸಾರದ ಜಂಜಡ ತಾಳಲಾಗದೆ ಈತ ಭೀಮಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ದೇವಣಗಾಂವ ಸೇತುವೆ ಮೇಲಿಂದ ಹಾರಿದ್ದಾನೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೂಡಲೇ ಜನರು ನೆರೆದು ಸಹಾಯಕ್ಕೆ ಕ್ರಮಕೈಗೊಳ್ಳುವಷ್ಟರಲ್ಲಿ ಆತ ನೀರಿನಲ್ಲಿ ಮುಳುಗಿಹೋಗಿದ್ದಾನೆ.

    ಕಳೆದ ಒಂದೆರಡು ವಾರದಿಂದ ಕೌಟುಂಬಿಕ ಕಲಹ ಕಾರಣಕ್ಕೆ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದೆ. ಒಂದೇ ಕುಟುಂಬದ ಐವರು, ಮೂವರು, ಇಬ್ಬರು.. ಹೀಗೆ ಜೊತೆಯಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ಹೆಚ್ಚಾಗಿದೆ.

    ಭಾರತ ಸುಧಾರಣೆ ಆಗುತ್ತಿದ್ದರೆ ಜಗತ್ತೇ ಪರಿವರ್ತನೆ ಆಗುತ್ತಿರುತ್ತದೆ: ಪ್ರಧಾನಿ ನರೇಂದ್ರ ಮೋದಿ

    ನಗರದಲ್ಲಿ ಮತ್ತೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಶುರು!; ಇನ್ಮುಂದೆ ಹೇಗೆ ಟೆಸ್ಟ್ ಮಾಡ್ತಾರೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts