ನವದೆಹಲಿ: ಕರೊನಾ ಆತಂಕ ದಿನೇದಿನೇ ಹೆಚ್ಚಾಗುತ್ತಿದ್ದು, ದೇಶದಲ್ಲಿ ಕರೋನಾ COVID19 ವೈರಾಣು ಸೋಂಕಿತರ ಸಂಖ್ಯೆ 18,000ದ ಗಡಿದಾಟಿದೆ. ಕರ್ನಾಟಕದಲ್ಲೂ 400ರ ಗಡಿ ದಾಟಿದೆ. ಕರೊನಾ ಹರಡುವಿಕೆ ತಡೆಗಟ್ಟಲು ದೇಶಾದ್ಯಂತ ಎರಡನೇ ಅವಧಿಯ ಲಾಕ್ಡೌನ್ ಚಾಲ್ತಿಯಲ್ಲಿದೆ. ಈ ನಡುವೆ, ಕೆಲವು ರಾಜ್ಯಗಳು ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿವೆ. ಇದೇ ವಿಚಾರವಾಗಿ ಕೇರಳ ಮತ್ತು ಕೇಂದ್ರ ಸರ್ಕಾರಗಳ ನಡುವೆ ಜಟಾಪಟಿಯೂ ಶುರುವಾಗಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆ ರಾಷ್ಟ್ರಪತಿ ಭವನದಲ್ಲೂ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿಮಾಡಿದೆ. ರಾಷ್ಟ್ರಪತಿ ಭವನದಲ್ಲಿ 500 ಕುಟುಂಬಗಳಿದ್ದು ಈ ಪೈಕಿ 125 ಕುಟುಂಬಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೆಲ್ಫ್ ಕ್ವಾರಂಟೈನ್ನಲ್ಲಿ ಇರುವಂತೆ ಆರೋಗ್ಯ ಸಚಿವಾಲಯ ನಿರ್ದೇಶನ ನೀಡಿದೆ.
ದೆಹಲಿಯಲ್ಲಿ ಕರೊನಾ ಪೀಡಿತರ ಸಂಖ್ಯೆ ಅಧಿಕವಾಗಿದ್ದು, ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅಲ್ಲಿ ಸರ್ಕಾರ ತೆಗೆದುಕೊಂಡಿದೆ. (ಏಜೆನ್ಸೀಸ್)
ಯಾರನ್ನೂ ಬಿಡಲ್ಲ ಮಟ್ಟಹಾಕ್ತೇವೆ: ಈಶ್ವರಪ್ಪ ಗುಡುಗು |ದುರ್ಬಳಕೆ ರಾಜಕಾರಣದ ಬಗ್ಗೆ ಮುಸ್ಲಿಮರು ಎಚ್ಚೆತ್ತುಕೊಳ್ಳಲಿ
One COVID-19 positive case found in Rashtrapati Bhavan, 125 families advised to remain in self-isolation as mandated by the Health Ministry’s guidelines as a precautionary measure: Sources
— ANI (@ANI) April 21, 2020