More

    ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಿಂದಾಗಿ ಜೀವವೇ ಹೋಯ್ತು; ತಲೆಗೆ ಗಂಭೀರ ಗಾಯವಾಗಿದ್ದ ವ್ಯಕ್ತಿ ಸಾವು

    ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಿಂದಾಗಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿದ್ದು, ಇನ್ನೊಬ್ಬನ ವಿರುದ್ಧ ಕೊಲೆ ಆರೋಪದ ಕೇಸು ದಾಖಲಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಸಾವಿಗೀಡಾದ ವ್ಯಕ್ತಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

    ಜಗದೀಶ್ ಸಾವಿಗೀಡಾಗಿದ್ದು, ಹೇಮಂತ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮೈಸೂರು ರಸ್ತೆಯ ನ್ಯೂ ಟಿಂಬರ್ ಯಾರ್ಡ್ ಲೇಔಟ್​ನ ಲಕ್ಷ್ಮೀ ಸಾಮಿಲ್ ಬಳಿ ಜ. 14ರಂದು ಈ ಘಟನೆ ನಡೆದಿದ್ದು, ಗಾಯಗೊಂಡಿದ್ದ ವ್ಯಕ್ತಿ ನಿನ್ನೆ ಸಾವಿಗೀಡಾಗಿದ್ದ.

    ಜ. 14ರಂದು ಸಾಮಿಲ್ ಎದುರಿದ್ದ ಹೇಮಂತ್ ಹಾಗೂ ಜಗದೀಶ್ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಆಗ ಹೇಮಂತ್ ಜಗದೀಶ್​ ಕಪಾಳಕ್ಕೆ ಬಾರಿಸಿದ್ದ. ಹೊಡೆತ ತೀವ್ರತೆಗೆ ರಸ್ತೆಗೆ ಬಿದ್ದ ಜಗದೀಶ್​ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಪರಿಚಿತರ ಮೂಲಕ ಪತ್ನಿ ಪದ್ಮಗೆ ಮಾಹಿತಿ ಗೊತ್ತಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಆಕೆ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಜಗದೀಶ್ ನಿನ್ನೆ ಸಾವಿಗೀಡಾಗಿದ್ದು, ಪದ್ಮ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಹೇಮಂತ್​ನನ್ನು ಬಂಧಿಸಿದ್ದಾರೆ.

    ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ

    ಜಿಮ್​ನಲ್ಲಿ ಮಾತಾಡ್ತ ಮಾತಾಡ್ತ ಕುಸಿದು ಬಿದ್ದು ಸಾವಿಗೀಡಾದ ಬಾಡಿಬಿಲ್ಡರ್!

    ‘ಅಭಿಮಾನಿ ದೇವರುಗಳೇ.. ನಮಸ್ಕಾರ ದೇವರು’: ಡಾ.ರಾಜ್​ ಆದರ್ಶದ ಡಾ.ಬ್ರೋ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts