ಶಿವಮೊಗ್ಗ: ಬಜರಂಗದ ದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ಒಂಬತ್ತನೇ ಆರೋಪಿಗೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಹರ್ಷ ಕೊಲೆ ಪ್ರಕರಣದ ಇನ್ನೊಬ್ಬ ಆರೋಪಿಗೂ ಜಾಮೀನು ಸಿಕ್ಕಂತಾಗಿದೆ.
ಪ್ರಕರಣದಲ್ಲಿ 9ನೇ ಆರೋಪಿ ಆಗಿರುವ ಸೈಯದ್ ನದೀಮ್ ಜಾಮೀನು ಪಡೆದ ವ್ಯಕ್ತಿ. ಬುಧವಾರ ಎನ್ಐಎ ಕೋರ್ಟ್ ನ್ಯಾಯಾಧೀಶ ಗಂಗಾಧರ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಹರ್ಷನ ಕೊಲೆ ಪ್ರಕರಣದಲ್ಲಿ ಕೊಲೆ ಮಾಡಿದ ಪ್ರಮುಖ ಆರೋಪಿಗಳು ಮೊಬೈಲ್ಫೋನ್ ಮತ್ತು ಬಟ್ಟೆಗಳನ್ನು ಬಿಚ್ಚಿ ಈತನಿಗೆ ಕೊಟ್ಟು ಹೋಗಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ ಆರೋಪ ಕೇಳಿಬಂದಿತ್ತು. ಸೈಯದ್ ನದೀಮ್ ಪರ ರಹಮತ್ ಉಲ್ಲಾ ಕೊತ್ವಾಲ್ ಅವರು ವಾದ ಮಂಡಿಸಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಆರೋಪಿ ಜಾಫರ್ ಸಾದಿಕ್ಗೆ ಜಾಮೀನು ದೊರೆತಿತ್ತು. ಜಾಫರ್ ಸಾದಿಕ್ ತನ್ನ ಕಾರನ್ನ ಕೊಲೆ ಹಂತಕರಿಗೆ ನೀಡಿದ್ದ ಆರೋಪ ಕೇಳಿಬಂದಿತ್ತು. ಆತನಿಗೂ ಜಾಮೀನು ದೊರೆತಿದೆ. ಹರ್ಷ ಕೊಲೆ ಪ್ರಕರಣದಲ್ಲಿ ಹತ್ತು ಆರೋಪಿಗಳನ್ನ ಪೊಲೀಸರು ಸೆರೆ ಹಿಡಿದು ಎನ್ಐಎಗೆ ಹಸ್ತಾಂತರಿಸಿದ್ದರು.
ಗಂಡನ ಕಿರುಕುಳ: ದೇಶದಲ್ಲಿ ಕರ್ನಾಟಕವೇ ಪ್ರಥಮ; ಮದ್ಯವ್ಯಸನಿಗಳಿಂದಲೇ ಜಾಸ್ತಿ ಉಪಟಳ..
ಗೃಹಪ್ರವೇಶದ ಮರುದಿನವೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ; ಮಗಳಿಂದಲೇ ಅಂತಿಮಸಂಸ್ಕಾರ..