ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​ ಪೈಪೋಟಿ ಮಧ್ಯೆ ಸಿಎಂ ಸ್ಥಾನಕ್ಕೆ ಮತ್ತೊಬ್ಬರು ಆಕಾಂಕ್ಷಿ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾರಿ ಪೈಪೋಟಿಯಲ್ಲಿ ಇರುವ ಮಧ್ಯೆ ಇದೀಗ ಆ ಸ್ಥಾನಕ್ಕೆ ಇನ್ನೊಬ್ಬರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸಿಎಂ ಆಯ್ಕೆ ವಿಚಾರ ಈಗಾಗಲೇ ಹೈಕಮಾಂಡ್​ಗೆ ತಲುಪಿದ್ದು, ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಪ್ರತ್ಯೇಕವಾಗಿ ಭೇಟಿ ಮಾಡಿ ಭಾರಿ ಮಾತುಕತೆ ನಡೆಸಿದ್ದಾರೆ. ಅದಾಗ್ಯೂ ಇದುವರೆಗೂ ಸಿಎಂ ಸ್ಥಾನದ ಕುರಿತು ಅಂತಿಮ ನಿರ್ಧಾರ ಹೊರಹೊಮ್ಮಿಲ್ಲ. … Continue reading ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​ ಪೈಪೋಟಿ ಮಧ್ಯೆ ಸಿಎಂ ಸ್ಥಾನಕ್ಕೆ ಮತ್ತೊಬ್ಬರು ಆಕಾಂಕ್ಷಿ!