More

    ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ; ಕಳೆದೆರಡು ತಿಂಗಳಲ್ಲಿ ನಾಲ್ವರ ಸಾವು…

    ಬೆಂಗಳೂರು: ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ವಿಗ್ಗಿ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
    ಯಾದಗಿರಿಯ ಸುರಪುರ ಮೂಲದ ದೇವಣ್ಣ (25) ಮೃತಪಟ್ಟವ. ಬಿಬಿಎಂಪಿ ಕಸದ ಲಾರಿ ಚಾಲಕ ದಾವಣಗೆರೆ ಮೂಲದ ದಿನೇಶ್ ನಾಯ್ಕ (40) ಬಂಧಿತ.

    ನಗರದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ದೇವಣ್ಣ, ಶನಿವಾರ ಸಂಜೆ ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ. ಅದೇ ರಸ್ತೆಯಲ್ಲಿ ಬಂದ ಬಿಬಿಎಂಪಿ ಕಸದ ಲಾರಿ ಮಾರ್ಗಮಧ್ಯೆ ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಹಿಂದಿನಿಂದ ದೇವಣ್ಣನ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ದೇವಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಗುತ್ತಿದೆದಾರ ವಿಶ್ವನಾಥ್ ಎಂಬುವವರಿಗೆ ಸೇರಿದ ಕಸದ ಲಾರಿ ಇದಾಗಿದೆ. ಒಂದೂವರೆ ವರ್ಷಗಳಿಂದ ಮಹಾದೇವಪುರ ವಾರ್ಡ್ ಕಸದ ಟೆಂಡರ್ ಪಡೆದು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ನಾಲ್ವರನ್ನು ಬಲಿ ಪಡೆದ ಕಸದ ಲಾರಿ

    ಕಳೆದ ಎರಡು ತಿಂಗಳಲ್ಲಿ ಬಿಬಿಎಂಪಿ ಕಸದ ಲಾರಿಗೆ ನಾಲ್ವರು ಬಲಿಯಾಗಿದ್ದಾರೆ.

    • ಮಾ.21ರಂದು ಹೆಬ್ಬಾಳದ ಬಳಿ ಬಿಬಿಎಂಪಿ ಕಸದ ಲಾರಿ ಹರಿದು ಅಕ್ಷಯ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಳು.
    • ಮಾ.31ರಂದು ಬಾಗಲೂರು ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ರಾಮಯ್ಯ ಎಂಬುವವರ ಮೇಲೆ ಕಸದ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದರು.
    • ಏ.18 ರಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಬ್ಯಾಂಕ್ ಉದ್ಯೋಗಿ ಪದ್ಮಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬಿಬಿಎಂಪಿ ಕಸದ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts