ಯಲಹಂಕ: ಸಾಮಾಜಿಕ ಜಾಲತಾಣದಲ್ಲಿ ಅಮಾಯಕ ವ್ಯಕ್ತಿಯೊಬ್ಬನಿಗೆ ಕರೊನಾ ಸೋಂಕಿದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಪಾಲಿಕೆ ಸದಸ್ಯೆಯ ಪತಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಬಿಬಿಎಂಪಿಯ ಚೌಡೇಶ್ವರಿ ವಾರ್ಡ್-2ರ ಕಾಪೋರೇಟರ್ ಪದ್ಮಾವತಿ ಅವರ ಪತಿ ಯಲಹಂಕ ನಗರಸಭೆ ಮಾಜಿ ಸದಸ್ಯ ಅಮರ್ನಾಥ್ ಬಂಧಿತ. ಯಲಹಂಕದಲ್ಲಿ ನೆಲೆಸಿರುವ ವ್ಯಕ್ತಿಗೆ ಕರೊನಾ ಸೋಂಕು ಇದೆ ಎಂದು ಅಮರನಾಥ್ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದ.
ಕೊಂಡಪ್ಪ ಲೇಔಟ್ನಲ್ಲಿ ಮೊದಲ ಕರೊನಾ ಪಾಸಿಟಿವ್ ಕೇಸ್ ಎಂದು ತೆಲುಗಿನಲ್ಲಿ ಸುಳ್ಳು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದ. ಈ ಸುಳ್ಳು ವದಂತಿಯಿಂದಾಗಿ ಆಂಧ್ರ ಹಾಗೂ ತೆಲಂಗಾಣದ ಕೂಲಿ ಕಾರ್ವಿುಕರು ಭಯಭೀತರಾಗಿ ಊರಿಗೆ ಹೋಗಲು ತಂಡೋಪತಂಡವಾಗಿ ಕೋಗಿಲು ಕ್ರಾಸ್ ಬಸ್ ನಿಲ್ದಾಣದ ಬಳಿ ಬಂದಿರುವುದನ್ನು ಕಂಡ ಪೊಲೀಸರು ವಿಚಾರಿಸಿದಾಗ ಅಮರನಾಥನ ಸುಳ್ಳು ಸುದ್ದಿಯ ವಿಚಾರ ಬಯಲಾಗಿದೆ.
ಏರ್ಗನ್ನಿಂದ ನಾಯಿಗಳ ಮೇಲೆ ದಾಳಿ ನಡೆಸಿದ ಮಹಿಳೆ: ಪ್ರಕರಣ ದಾಖಲಿಸಿದ್ರು ಪೊಲೀಸರು