More

    ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡ ನಿರ್ಭಯಾ ಪ್ರಕರಣ ಅಪರಾಧಿ: ಗಲ್ಲಿಗೂ ಮೊದಲೇ ಆತ್ಮಹತ್ಯೆ ಪ್ರಯತ್ನವಾ?

    ನವದೆಹಲಿ: ದೆಹಲಿ ನಿರ್ಭಯಾ ಪ್ರಕರಣದ ಆರೋಪದಡಿಯಲ್ಲಿ ತಿಹಾರ್​ ಜೈಲಿನಲ್ಲಿರುವ ಅಪರಾಧಿಗಳ ಪೈಕಿ ಒಬ್ಬಾತ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡಿರುವ ಘಟನೆ ನಡೆದಿದೆ.

    ಮಾರ್ಚ್​ 3ರಂದು ಗಲ್ಲಿಗೆ ಏರಲಿರುವ ಅಪರಾಧಿ ವಿನಯ್​ ಶರ್ಮಾ ಫೆ.16ರಂದು ತನ್ನ ತಲೆಯನ್ನು ಜೈಲಿನ ಗೋಡೆಗೆ ಚಚ್ಚಿಕೊಂಡಿದ್ದಾನೆ ಎನ್ನುವುದು ವರದಿಯಾಗಿದೆ. ಆತನ ಮಾನಸಿಕ ಸ್ಥಿತಿ ಸರಿ ಇಲ್ಲದ ಕಾರಣ ಆತ ಈ ರೀತಿಯಲ್ಲಿ ನಡೆದುಕೊಂಡಿದ್ದಾನೆ ಎನ್ನಲಾಗಿದೆ, ಅಪರಾಧಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

    ವಿನಯ್​ ಶರ್ಮಾ ತನ್ನ ತಪ್ಪನ್ನು ಮನ್ನಿಸುವಂತೆ ರಾಷ್ಟ್ರಪತಿಗಳಿಗೆ ಕ್ಷಮಾದಾನ ಪತ್ರವನ್ನು ಬರೆದಿದ್ದ. ಆದರೆ ರಾಷ್ಟ್ರಪತಿಗಳು ಆ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆ ಆತ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ. ಸುಪ್ರೀಂ ಕೋರ್ಟ್​ ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್​ 3ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ಆದೇಶ ನೀಡಿದೆ.

    ಅಪರಾಧಿ ವಿನಯ್​ ಶರ್ಮಾ ಮಾನಸಿಕ ಸ್ಥಿತಿ ಸರಿ ಇಲ್ಲ ಎಂಬ ಕಾರಣಕ್ಕೆ ಆತನ ಪರ ವಕೀಲ ಆತನಿಗೆ ಗಲ್ಲು ಶಿಕ್ಷೆ ವಿಧಿಸಬಾರದು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದ. ಆದರೆ ನ್ಯಾಯಾಲಯವು ಆತನಿಗೆ ಚಿಕಿತ್ಸೆ ನೀಡಲು ಹೇಳಿ, ಗಲ್ಲು ಶಿಕ್ಷೆ ತಡೆಯ ವಿಚಾರವನ್ನು ಕೈ ಬಿಟ್ಟಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts