ಬೆಂಗಳೂರು: ದರ್ಗಾ ನೆಲಸಮಗೊಳಿಸುತ್ತಿದ್ದ ಸಂದರ್ಭದಲ್ಲಿ ಗೋಡೆ ಕುಸಿದು ಒಬ್ಬ ಸಾವಿಗೀಡಾಗಿದ್ದು, ಗಾಯಗೊಂಡಿರುವ ಇನ್ನೊಬ್ಬನ ಪರಿಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಅವೆನ್ಯೂ ರಸ್ತೆಯ ಹಜ್ರತ್ ಮೊಹಮ್ಮದ್ ಶಾ ದರ್ಗಾ ನೆಲಸಮ ವೇಳೆ ಈ ದುರ್ಘಟನೆ ಸಂಭವಿಸಿದೆ.
ಹಜರ್ ಉಲ್ ಹಕ್ (25) ಸಾವಿಗೀಡಾದ ಕಾರ್ಮಿಕ, ಗಾಯಗೊಂಡಿರುವ ಇನ್ನೊಬ್ಬನ ಪರಿಸ್ಥಿತಿ ಗಂಭೀರವಾಗಿದೆ. ಇವರಿಬ್ಬರು ಗುತ್ತಿಗೆ ಪಡೆದು ದರ್ಗಾ ನೆಲಸಮಗೊಳಿಸುತ್ತಿದ್ದಾಗ ವೇಳೆ ಛಾವಣಿ ಕುಸಿದು ಬಿದ್ದಿತ್ತು.
ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಒಬ್ಬ ಸಾವಿಗೀಡಾಗಿದ್ದಾನೆ. ಇನ್ನೊಬ್ಬನ ಪರಿಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಳ್ಳುಹಂದಿಯ ಆಸೆಗೆ ಪ್ರಾಣವನ್ನೇ ಕಳೆದುಕೊಂಡ್ರು; ಗುಹೆಯೊಳಗೆ ಉಸಿರುಗಟ್ಟಿ ಇಬ್ಬರ ಸಾವು