ಡೆಲ್ಟಾ ಪ್ಲಸ್ ಸೋಂಕಿನಿಂದ ಒಬ್ಬರು ಗುಣಮುಖ: ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆತಂಕಕ್ಕೆ ಎಡೆಮಾಡಿಕೊಟ್ಟಿರುವ ಕರೊನಾ ರೂಪಾಂತರಿ ವೈರಾಣು ಡೆಲ್ಟಾ ಪ್ಲಸ್ ಸೋಂಕಿನ ಬಗ್ಗೆ ಆಶಾದಾಯಕ ಮಾಹಿತಿ ಹೊರ ಬಿದ್ದಿದೆ. ಸಮಸ್ಯೆ ಗಂಭೀರವಾಗಿಲ್ಲ ಹಾಗೂ ಸೋಂಕಿತರ ಸಂಪರ್ಕಿತರಿಗೂ ಹರಡಿಲ್ಲ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ‌ ಶುಕ್ರವಾರ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿ, ಮೈಸೂರಿನ ಡೆಲ್ಟಾ ಪ್ಲಸ್​​ ಕರೊನಾ ಸೋಂಕಿತ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇರುವ ಮತ್ತೊಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಬ್ಬರ ಸಂಪರ್ಕಿತರ್ಯಾರಿಗೂ ಸೋಂಕು‌ ಹರಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: … Continue reading ಡೆಲ್ಟಾ ಪ್ಲಸ್ ಸೋಂಕಿನಿಂದ ಒಬ್ಬರು ಗುಣಮುಖ: ಸಚಿವ ಸುಧಾಕರ್ ಮಾಹಿತಿ