ಗಂಗೊಳ್ಳಿ: ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಏಕಾಹ ಅಖಂಡ ಭಜನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಆರಂಭವಾಯಿತು.
ಬೆಳಗ್ಗೆ ದೇವತಾ ಪ್ರಾರ್ಥನೆ ಬಳಿಕ ಏಕಾಹ ಭಜನೆ ದೀಪ ಸ್ಥಾಪನೆ ಧಾರ್ಮಿಕ ವಿದಿವಿಧಾನ ನಡೆಯಿತು. ದೇವಸ್ಥಾನ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್, ಜಿ.ಪ್ರದೀಪ ಭಟ್ ಮತ್ತು ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನ ಜರುಗಿತು. ದೇವಸ್ಥಾನ ಆಡಳಿತ ಮಂಡಳಿ ಉಪಾಧ್ಯಕ್ಷ ಜಿ.ರಾಧಾಕೃಷ್ಣ ನಾಯಕ್ ದೀಪ ಪ್ರಜ್ವಲಿಸಿ ಭಜನೆಗೆ ಚಾಲನೆ ನೀಡಿದರು. ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ, ವಿರಾಟರೂಪ ದರ್ಶನ, ಸಂಜೆ ಮಕ್ಕಳ ಉತ್ಸವ ಮತ್ತಿತರ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಡಾ.ಕಾಶೀನಾಥ ಪೈ, ಜಿ.ಗೋವಿಂದ್ರಾಯ ಆಚಾರ್ಯ, ಯು.ಸುರೇಶ ಪೈ, ಬಿ.ವಾಸುದೇವ ಪಡಿಯಾರ್, ಜಿ.ರಾಮಚಂದ್ರ ಪೈ, ಬಿ.ರಾಘವೇಂದ್ರ ಪೈ, ದೇವಸ್ಥಾನದ ವ್ಯವಸ್ಥಾಪಕ ಟಿ.ಶ್ರೀಕರ ಶೆಣೈ, ಜಿ.ಸಂದೀಪ ನಾಯಕ್, ಜಿ.ಮಾಧವ ಪೈ, ಜಿ.ಶ್ರೀನಾಥ ಭಟ್ ಮತ್ತಿತರರು ಉಪಸ್ಥಿತರಿದ್ದರು. ಡಿ.12ರಂದು ಬೆಳಗ್ಗೆ ಮುಕ್ಕೋಟಿ ಉತ್ಸವ, ದೀಪ ವಿಸರ್ಜನೆ, ಮಧ್ಯಾಹ್ನ ಪೂಜೆ, ಸಂಜೆ ಪಲ್ಲಕಿ ಉತ್ಸವ ನಡೆಯಲಿದೆ.