ಉಡುಪಿ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರ ತಲೆ ಕಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕರೆ ನೀಡಿದ್ದವನನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.
ಮಹಮ್ಮದ್ ಶಫಿ ಬಂಧಿತ ಆರೋಪಿ. ಈತ ಮಾರಿಗುಡಿ ಎಂಬ ಇನ್ಸ್ಟಾಗ್ರಾಂ ಖಾತೆ ಮೂಲಕ ಇಂಥದ್ದೊಂದು ಪ್ರಚೋದಕ ಹೇಳಿಕೆ ನೀಡಿದ್ದ. ‘ಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗಂತ ಬರೆದುಕೊಂಡಿದ್ದಲ್ಲದೆ, 100% ಈ ಎರಡು ತಲೆ ಉರುಳೋದು ಖಚಿತ ಎಂದು ಪೋಸ್ಟ್ ಮಾಡಲಾಗಿತ್ತು.
ಐಪಿ ವಿಳಾಸದ ಮೂಲಕ ಮಂಗಳೂರಿನ ಸುರತ್ಕಲ್ನಲ್ಲಿ ಆರೋಪಿಯನ್ನು ಬಂಧಿಸಿರುವ ಕಾಪು ಪೊಲೀಸರು ಈತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಂಗಳೂರಿನ ಬಜ್ಪೆ ನಿವಾಸಿಯಾಗಿರುವ ಈತ ಸುರತ್ಕಲ್ ಭಾಗದಲ್ಲಿ ಲಾಜಿಸ್ಟಿಕ್ನಲ್ಲಿ ಕೆಲಸ ಮಾಡುತ್ತಿದ್ದ. ಲಾರಿಗಳ ಸೂಪರ್ವೈಸರ್ ಆಗಿರುವ ಮಹಮ್ಮದ್ ಶಫಿ, ಕಾಂಗ್ರೆಸ್ ಕಾರ್ಯಕರ್ತನಾಗಿಯೂ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.
ಮಳಲಿ ವಿಚಾರದಲ್ಲಿ ಯಶಪಾಲ್ ಸುವರ್ಣ ಅವರನ್ನು ಟಾರ್ಗೆಟ್ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದು, ಇವನೊಂದಿಗೆ ಕೈಜೋಡಿಸಿರುವ ಮಹಮ್ಮದ್ ಆಸಿಫ್ಗಾಗಿ ಪೊಲೀಸರು ಬಲೆಬೀಸಿದ್ದಾರೆ. ಎರಡನೇ ಆರೋಪಿ ಮಹಮ್ಮದ್ ಆಸಿಫ್ ಅಲಿಯಾಸ್ ಆಶಿಕ್ ದುಬೈನಲ್ಲಿ ನೆಲೆಸಿದ್ದಾನೆ. ಮಹಮ್ಮದ್ ಶಫಿ ಬಂಧನದ ಬಳಿಕ ಇನ್ಸ್ಟಾಗ್ರಾಮ್ನಲ್ಲಿರುವ ಮಾರಿಗುಡಿ ಅಕೌಂಟ್ನಲ್ಲಿರುವ ಎಲ್ಲ ಪೋಸ್ಟ್ ಡಿಲೀಟ್ ಆಗಿದೆ ಎಂದು ಎಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ.
ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ