More

    ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

    ಶಿವಮೊಗ್ಗ: ಮನೆಯಲ್ಲಿ ಆಟವಾಡಿಕೊಂಡಿದ್ದ ಒಂದು ವರ್ಷ ಮಗು ಅಡಕೆ ನುಗ್ಗಿ ದುರಂತ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

    ಸಂದೇಶ್ ಮತ್ತು ಅರ್ಚನಾ ದಂಪತಿ ಪುತ್ರ ಶ್ರೀಹಾನ್(1) ಮೃತ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸಂದೇಶ್​, ಕರೊನಾ ಸಂದರ್ಭದಿಂದ ಹೆದ್ದೂರಿನ ಮನೆಯಲ್ಲಿ ಮಗು ಬಿಟ್ಟಿದ್ದರು. ಭಾನುವಾರ ಬೆಂಗಳೂರಿಗೆ ಕರೆದುಕೊಂಡು ಹೋಗುವ ಆಲೋಚನೆಯಲ್ಲಿದ್ದರು. ಅಷ್ಟರಲ್ಲಿ ಅಡಕೆ ರೂಪದಲ್ಲಿ ಬಂದ ಜವರಾಯ ಮಗುವಿನ ಪ್ರಾಣ ಹೊತ್ತೊಯ್ದಿದ್ದಾನೆ. ಇದನ್ನೂ ಓದಿರಿ ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

    ಇತ್ತೀಚೆಗೆ ಆರೋಗ್ಯ ಇಲಾಖೆ ಆಯೋಜಿಸಿದ್ದ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಶ್ರೀಹಾನ್‌ಗೆ ‘ಆರೋಗ್ಯವಂತ’ ಮಗು ಎಂಬ ಪುರಸ್ಕಾರ ಜತೆಗೆ ನಗದು ಬಹುಮಾನ ನೀಡಿ ಗೌರವಿಸಲಾಗಿತ್ತು. ಶನಿವಾರ ಬೆಳಗ್ಗೆ ಮನೆಯಲ್ಲಿ ಆಟವಾಡಿಕೊಂಡಿದ್ದ ಶ್ರೀಹಾನ್​, ಹರಿವಾಣ ತಟ್ಟೆಯಲ್ಲಿದ್ದ ಅಡಕೆ ನುಂಗಿ ಉಸಿರುಗಟ್ಟಿ ಒದ್ದಾಡುತ್ತಿದ್ದ.

    ಕೂಡಲೇ ಮಗುವನ್ನು ಕಟ್ಟೆಹಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಅಲ್ಲಿಂದ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ. ಮಗುವಿನ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

    ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

    ಮೊಮ್ಮಗನಿಂದಲೇ ಅಜ್ಜಿ ಕೊಲೆ! ಗೋಬರ್​ ಗ್ಯಾಸ್​ ಗುಂಡಿಯಲ್ಲಿ ಬಿದ್ದಿತ್ತು ಹೆಣ…

    ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts