ಚಾಮರಾಜನಗರ: ಅಪ್ಪನನ್ನೇ ಹಿಂಬಾಲಿಸಿಕೊಂಡು ಮನೆಯ ಹೊರಗೆ ಬಂದ ಹಾಲುಗಲ್ಲದ ಕಂದ ಅಪ್ಪನ ಕಾರಿಗೇ ಸಿಕ್ಕಿ ಮೃತಪಟ್ಟಿದ್ದಾನೆ. ಚಿಕ್ಕಹೊಳೆ ಬಳಿಯ ಬೊಮ್ಮನಹಳ್ಳಿಯಲ್ಲಿ ಬುಧವಾರ ಈ ದುರ್ಘಟನೆ ನಡೆದಿದ್ದು, ಶಕ್ತಿವೇಲು ಅವರ ಒಂದು ವರ್ಷದ ಪುತ್ರ ರೋಹಿತ್ ದುರ್ಮರಣಕ್ಕೀಡಾಗಿದ್ದಾನೆ.
ಹೊರಗಡೆ ಹೊರಟಿದ್ದ ಶಕ್ತಿವೇಲು ಶೆಡ್ನಿಂದ ಕಾರು ತೆಗೆಯುವ ವೇಳೆ ಮಗು ಅಪ್ಪನನ್ನು ಹಿಂಬಾಲಿಸಿದೆ. ಮಗು ಬಂದದ್ದು ಗಮನಿಸದ ತಂದೆ ಕಾರನ್ನು ರಿವರ್ಸ್ ತೆಗೆದಿದ್ದಾರೆ. ಆ ವೇಳೆ ಅಲ್ಲೇ ಇದ್ದ ಮಗುವಿಗೆ ಕಾರು ಗುದ್ದಿದೆ.
ಇದನ್ನೂ ಓದಿರಿ ಪತಿ-ಪತ್ನಿ ಇಬ್ಬರೂ ನೀರುಪಾಲು: ಮೂರು ವರ್ಷದ ಮಗು ಅನಾಥ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ಅಸ್ವಸ್ಥಗೊಂಡ ಮಗುವನ್ನು ಕೂಡಲೇ ತಾಳವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿರಿ ಜೂಮ್ ವಿಡಿಯೋ ಕಾಲ್ನಲ್ಲೇ ಅಪರಾಧಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!