ಇನ್ಮುಂದೆ ಮದುವೆಯಲ್ಲೂ…ಮಸಣದಲ್ಲೂ 20 ಮಂದಿಗೆ ಮಾತ್ರ ಅವಕಾಶ; ಈ ರಾಜ್ಯದ ಖಡಕ್​ ಸೂಚನೆ

blank

ಈ ಹಿಂದೆ ಕರೊನಾವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ, ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊಗಳಿಸಿಕೊಂಡಿದ್ದ ಕೇರಳದಲ್ಲಿ ಇದೀಗ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಕರೊನಾ ನಿಯಂತ್ರಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ನೇತೃತ್ವದ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ.

ಲಾಕ್​ಡೌನ್​ ಮಾರ್ಗಸೂಚಿಯಲ್ಲಿ ಇಂದು ಕೆಲವು ಬದಲಾವಣೆಗಳನ್ನು ಕೇರಳ ಸರ್ಕಾರ ಘೋಷಿಸಿದೆ. ಇನ್ನು ಮುಂದೆ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಾಗಲಿ…ಅಂತ್ಯಕ್ರಿಯೆಯಲ್ಲಾಗಲಿ 20 ಜನರು ಮಾತ್ರ ಭಾಗವಹಿಸಲು ಅವಕಾಶ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಅದಕ್ಕಿಂತ ಹೆಚ್ಚಿನ ಜನರು ಪಾಲ್ಗೊಂಡರೆ ಪ್ರಕರಣ ದಾಖಲಾಗುತ್ತದೆ. ಈ ಮೊದಲು 50 ಜನರಿಗೆ ಭಾಗವಹಿಸಲು ಅವಕಾಶ ಇಡಲಾಗಿತ್ತು. ಆದರೆ ಕರೊನಾ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವಾದ ತಕ್ಷಣ ಕರೊನಾ ನಾಶವಾಗುತ್ತದೆ ಎಂದ ಬಿಜೆಪಿ ಎಂಪಿ

ಕೋಳಿಕ್ಕೋಡ್​ ಮತ್ತು ವಯಾನಾಡು ಜಿಲ್ಲೆಗಳಲ್ಲಿ ಈ ಹಿಂದಿನ ಲಾಕ್​ಡೌನ್​ ನಿಯಮಗಳನ್ನು ಮೀರಿ ಮದುವೆ ಮಾಡಲಾಗಿತ್ತು. ಅಲ್ಲದೆ ಅಂತ್ಯಕ್ರಿಯೆಯೊಂದರಲ್ಲೂ 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಇದರಿಂದಾಗಿ 70ಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿತ್ತು. ಇವೆರಡೆ ಪ್ರದೇಶಗಳಲ್ಲದೆ ಇನ್ನೂ ಕೆಲವು ಕಡೆ ನಿಯಮಗಳ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ, ಲಾಕ್​​ಡೌನ್​ನ್ನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಿದ್ದಾಗಿ ಕೇರಳ ಸರ್ಕಾರ ಹೇಳಿದೆ.

ಕೇರಳದಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕರೊನಾ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳೆದ 24 ಗಂಟೆಯಲ್ಲಿ 1,167 ಮಂದಿಯಲ್ಲಿ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 20,896ಕ್ಕೆ ಏರಿದೆ. (ಏಜೆನ್ಸೀಸ್​)

ದೇಶದಲ್ಲಿ 15 ಲಕ್ಷದ ಗಡಿದಾಟಿದ ಕರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣದಲ್ಲಿ ಏರಿಕೆ

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…