ನವದೆಹಲಿ: ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ಗಳು ಕೆಲವು ಜನವರಿ 31 ಮತ್ತು ಫೆಬ್ರವರಿ 1ಕ್ಕೆ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಆ ಎರಡು ದಿನಗಳಲ್ಲಿ ಬ್ಯಾಂಕಿಂಗ್ ವಹಿವಾಟು ತೊಂದರೆಗೀಡಾಗಬಹುದು ಎಂದು ದೇಶದ ಮುಂಚೂಣಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ತಿಳಿಸಿದೆ.
ತನ್ನ ಎಲ್ಲ ಶಾಖೆಗಳಲ್ಲಿ ಸಹಜ ಬ್ಯಾಂಕಿಂಗ್ ವಹಿವಾಟಿಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿರುವ ಎಸ್ಬಿಐ, ಮುಷ್ಕರದ ಪರಿಣಾಮ ಇತರೆ ಬ್ಯಾಂಕುಗಳಂತೆ ನಮ್ಮಲ್ಲೂ ಆಗಲಿದೆ ಎಂದು ಹೇಳಿಕೊಂಡಿದೆ.
ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಜತೆಗೆ ವೇತನ ಪರಿಷ್ಕರಣೆ ಸಂಬಂಧದ ಮಾತುಕತೆ ಫಲಪ್ರದವಾಗದ ಕಾರಣ ಯೂನಿಯನ್ಗಳು ಮುಷ್ಕರಕ್ಕೆ ಕರೆ ನೀಡಿವೆ.ಹೀಗಾಗಿ ಐಬಿಎ ನೀಡಿರುವ ಸಲಹೆ ಮೇರೆಗೆ ನಾವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಎಸ್ಬಿಐ ಹೇಳಿದೆ.
ಒಂಭತ್ತು ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ಗಳ ಕನ್ಸೋರ್ಟಿಯಂ ಆಗಿರುವ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ ಈ ಮುಷ್ಕರಕ್ಕೆ ಕರೆ ನೀಡಿರುವಂಥದ್ದು. ಇದರಲ್ಲಿ, ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್ಫೆಡರೇಷನ್, ನ್ಯಾಷನಲ್ ಕಾನ್ಫಡರೇಷನ್ ಆಫ್ ಬ್ಯಾಂಕ್ ಎಂಪ್ಲಾಯೀಸ್, ಆಲ್ ಇಂಡಿಯಾ ಬ್ಯಅಂಕ್ ಆಫೀಸರ್ಸ್ ಅಸೋಸಿಯೇಷನ್, ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ, ಇಂಡಿಯನ್ ನ್ಯಾಷನಲ್ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್, ಇಂಡಿಯನ್ ನ್ಯಾಷನಲ್ ಬ್ಯಾಂಕ್ ಆಫೀಸರ್ಸ್ ಕಾಂಗ್ರೆಸ್, ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ವರ್ಕರ್ಸ್, ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ಆಫೀಸರ್ಸ್ ಈ ಕನ್ಸೋರ್ಟಿಯಂನಲ್ಲಿ ಇವೆ. (ಏಜೆನ್ಸೀಸ್)