ಬಾಗಲಕೋಟೆ: ಭಗವಾನ್ ಬಾಹುಬಲಿಗೆ ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡಿದ್ದ ಜೆಡಿಎಸ್ ಮುಖಂಡ ಅಯೂಬ್ ಖಾನ್, ನಟ ಪ್ರಥಮ್ ಹಾಗೂ ಪ್ರಕಾಶ್ ಸುಡಾಳ ವಿರುದ್ಧ ಜೈನ ಸಮುದಾಯದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಷ್ಟೇ ಅಲ್ಲದೆ, ಪ್ರತಿಭಟನೆಯನ್ನೂ ಕೈಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಪ್ರತಿಭಟನೆ ಮಾಡುವ ಜತೆಗೆ ಬಹಿರಂಗ ಸಭೆಯನ್ನು ಆಯೋಜಿಸಿರುವ ಜೈನ ಸಮುದಾಯದವರು, ಅಯೂಬ್ ಖಾನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮತ್ತೊಂದು ವೃದ್ಧ ದಂಪತಿಯ ಬರ್ಬರ ಕೊಲೆ: ಇಲ್ಲೂ ಬೇರೆ ಬೇರೆ ಕೋಣೆಗಳಲ್ಲಿ ಹತ್ಯೆ!
ಪಟ್ಟಣದ ಮಹಾವೀರ ವೃತ್ತದಿಂದ ಮಾರುಕಟ್ಟೆ, ಗುಮ್ಮಟಗಲ್ಲಿ ಮೂಲಕ ತಹಸೀಲ್ದಾರ್ ಕಚೇರಿವರೆಗೂ ಮೆರವಣಿಗೆಯಲ್ಲಿ ತೆರಳಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸಭೆ ನಡೆಸಿದರು. ಜೈನ ಸಮುದಾಯಕ್ಕೆ ಅಪಮಾನ ಮಾಡಿರುವ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ, ತೇರದಾಳ ಭಾಗದ ಜೈನ ಸಮುದಾಯದವರು ಪ್ರತಿಭಟನೆಯಲ್ಲಿದ್ದರು. ತ್ಯಾಗಮೂರ್ತಿ ಭಗವಾನ್ ಬಾಹುಬಲಿಗೆ ಅಪಮಾನ ಮಾಡಿ ಜೈನ ಸಮಾಜದವರ ಭಾವನೆಗೆ ಧಕ್ಕೆ ತಂದಿದ್ದಾರೆ. ಮೈಸೂರಿನ ಅಯೂಬ್ ಖಾನ್, ಬೆಂಗಳೂರಿನ ಪ್ರಥಮ್ ಹಾಗೂ ಪ್ರಕಾಶ್ ಸುಡಾಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತೊಂದು ಶಾಲೆಯಲ್ಲೂ ನಮಾಜ್; ಹಿಜಾಬ್ ಧರಿಸಿ ನಮಾಜ್ ಮಾಡಿದ ವಿದ್ಯಾರ್ಥಿನಿಯರು