More

    ಪ್ರತಿಪಕ್ಷ ಎಂದರೆ ಶಾಡೋ ಸರ್ಕಾರವಿದ್ದಂತೆ

    ಶಿವಮೊಗ್ಗ: ಪ್ರತಿಪಕ್ಷ ಎಂದರೆ ಶಾಡೋ ಸರ್ಕಾರವಿದ್ದಂತೆ. ಸರ್ಕಾರ ಬೀಳಿಸುವುದು ಪ್ರತಿಪಕ್ಷದ ಕೆಲಸವಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದಿದ್ದರೆ ಸರ್ಕಾರವನ್ನು ಪ್ರಶ್ನಿಸಬೇಕಿದೆ. ಆದರೆ ಆ ಕೆಲಸ ಬಿಜೆಪಿ ಮಾಡುತ್ತಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ದೂರಿದರು.

    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಯಾವತ್ತೂ ತನ್ನ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿಲ್ಲ. ಎರಡನೇ ಅವಧಿಗೆ ಸರ್ಕಾರ ನಡೆಸಿರುವುದೇ ಹೆಚ್ಚು. ಪದೇಪದೆ ಸರ್ಕಾರ ಬೀಳಿಸುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಈಗ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಹಣೆಬರಹ ಗೊತ್ತಾಗಲಿದೆ ಎಂದು ಟಾಂಗ್ ನೀಡಿದರು. ಆರು ತಿಂಗಳಲ್ಲಿ 100 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು ಇದೊಂದು ದಾಖಲೆ ಆಗಿದೆ. ಇದನ್ನು ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಬರ ಕಾರಣದಿಂದ ಸರ್ಕಾರ ಆ ಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದರು.
    ಜಾತಿಗಣತಿ ವರದಿ ಬಿಡುಗಡೆ ಆಗಬೇಕು. ಆದರೆ ಪ್ರತಿಪಕ್ಷದವರು ಕಾಂತರಾಜು ವರದಿ ಬಗ್ಗೆ ಆಕ್ಷೇಪಣೆ ಮಾಡಿದ್ದಾರೆ. ಆಕ್ಷೇಪಣೆಯನ್ನು ಸರಿಪಡಿಸಿ ಜಾರಿಗೊಳಿಸಬೇಕಿದೆ. ವರದಿಯನ್ನು ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts