ನವದೆಹಲಿ: ಸಂಸತ್ ಸದಸ್ಯತ್ವದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹ ಮಾಡಿರುವುದನ್ನು ಖಂಡಿಸಿ ಸೋಮವಾರ ವಿಪಕ್ಷಗಳ ಸದಸ್ಯರು ಕಪ್ಪು ಬಟ್ಟೆ ಧರಿಸಿ ಸಂಸತ್ ಭವನದ ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ.
ವಿಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ, ಜೆಡಿ(ಯು), ಬಿಆರ್ಎಸ್, ಸಿಪಿಐ(ಎಂ), ಆರ್ಜೆಡಿ, ಎನ್ಸಿಪಿ, ಎನ್ಡಿಎಂಕೆ, ಶಿವಸೇನೆ(ಉದ್ದವ್ ಠಾಕ್ರೆ ಬಣ), ಎಎಪಿ ಪಕ್ಷದ ಸದಸ್ಯರು ಸಂಸತ್ ಭವನದಿಂದ ವಿಜಯ್ ಚೌಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಘೋಷಣೆಗಳನ್ನ ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನ ರಕ್ಷಿಸಲು ಯಾರು ಮುಂದೆ ಬರುತ್ತಾರೋ ಅವರನ್ನು ನಾವು ಸ್ವಾಗತಿಸುತ್ತೇವೆ. ತಮ್ಮನ್ನು ಬೆಂಬಲಿಸಿದ ಎಲ್ಲಾ ಸಮಾನ ಮನಸ್ಕರ ಪಕ್ಷಗಳಿಗೆ ಧನ್ಯವಾದಗಳನ್ನ ತಿಳಿಸಿದ್ಧಾರೆ.
ಇದನ್ನೂ ಓದಿ: ಎಲ್ಲಾ ಪಕ್ಷದವರು ನನ್ನನ್ನು ಫುಟ್ಬಾಲ್ನಂತೆ ಆಡಿಸಿದ್ದರು! ಹೀಗಾಗಿ ಫುಟ್ಬಾಲ್ ಚಿಹ್ನೆ ಆಯ್ಕೆ ಮಾಡಿಕೊಂಡೆ; ಜನಾರ್ದನ ರೆಡ್ಡಿ