ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion) ಎಂದು ಕರೆಯುತ್ತೇವೆ.
ಇದನ್ನೂ ಓದಿ: ಭಯ್ಯಾ ಎನ್ನುತ್ತಿದ್ದೆ ಈಗ ಅವನ ಮಗುವಿಗೆ ತಾಯಿಯಾದೆ! ಮಹಿಳೆಯ ವಿಡಿಯೋ ನೋಡಿ ಹುಬ್ಬೇರಿಸಿದ ನೆಟ್ಟಿಗರು
ಮೋಜಿನ ಮಾರ್ಗ
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಕೋಳಿಗಳು ಮತ್ತು ಒಂದು ಕುರಿಯನ್ನು ನೋಡಬಹುದು. ಅವುಗಳ ನಡುವೆ ತೆಂಗಿನಕಾಯಿ ಇದೆ. ಅದು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ಆದರೆ, ಅದು ಸುಲಭವಲ್ಲ. ಏಕೆಂದರೆ, ಕುರಿಯ ಬಣ್ಣಕ್ಕೂ ತೆಂಗಿನಕಾಯಿ ಬಣ್ಣಕ್ಕೂ ಸಾಮ್ಯತೆ ಇದೆ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ತೆಂಗಿನ ಕಾಯಿಯನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ತೆಂಗಿನಕಾಯಿಯನ್ನು ಪತ್ತೆಹಚ್ಚಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ: 500 ದಿನ ಒಬ್ಬರೇ ಗುಹೆ ಒಳಗೆ ಇದ್ದ ಪರ್ವತಾರೋಹಿ! ಹೊರಗೆ ಬರುತ್ತಲೇ ಹೇಳಿದ್ದೇನು?
10 ಸೆಕೆಂಡ್ ಸಮಯದಲ್ಲಿ ನೀವು ಫೋಟೋದಲ್ಲಿರುವ ತಂಗಿನಕಾಯಿ ಪತ್ತೆಹಚ್ಚಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್ ಮಾರ್ಕ್ಸ್ ಕೊಟ್ಟುಬಿಡಿ. ಒಂದು ವೇಳೆ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. ಕುರಿಯ ಮೂಗಿಗೆ ತೆಂಗಿನಕಾಯಿಯ ಒಂದು ಹೋಳನ್ನು ಅಂಟಿಸಲಾಗಿದ್ದು, ಕುರಿಯ ಮೂಗಿನಂತೆಯೇ ಭಾಸವಾಗುತ್ತದೆ. (ಏಜೆನ್ಸೀಸ್)
ಮಧ್ಯೆ ಮಾತಾಡಬೇಡ ಎಂದಿದ್ದಕ್ಕೆ ಮಹಿಳಾ ಎಎಸ್ಐ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೆಬಲ್!
ಕಾಂಗ್ರೆಸ್-ಬಿಜೆಪಿ ಉತ್ತರ-ದಕ್ಷಿಣ ಗುರಿ; ಹೆಚ್ಚು ಸ್ಥಾನಕ್ಕೆ ಎರಡೂ ಪಕ್ಷಗಳಿಂದ ಸ್ಪಷ್ಟ ಲೆಕ್ಕಾಚಾರ
ಜ್ಯೋತಿಷಿಗಳಿಗೆ ಡಿಮ್ಯಾಂಡ್! ನಾಮಪತ್ರ ಸಲ್ಲಿಕೆಗೆ ಶುಭ ಮುಹೂರ್ತದ ಕೋರಿಕೆ