ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ಮೊಲವನ್ನು ಪತ್ತೆಹಚ್ಚಬಲ್ಲರು!

blank

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ಮೊಲವನ್ನು ಪತ್ತೆಹಚ್ಚಬಲ್ಲರು!

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಪಾರ್ಕ್​ ಒಂದರಲ್ಲಿ ಹೂವಿನ ಗಿಡಗಳು ಇರುವ ಪ್ರದೇಶವನ್ನು ಕಾಣಬಹುದು. ಗಿಡಗಳ ನಡುವೆ ಒಂದು ಮೊಲ ಸೇರಿಕೊಂಡಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಗಿಡದ ಬಣ್ಣ ಮತ್ತು ಮೊಲದ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿದ್ದು, ಮೊಲ ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಮೊಲ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಮೊಲವನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಮೊಲವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ಮೊಲವನ್ನು ಪತ್ತೆಹಚ್ಚಬಲ್ಲರು!

ಮದ್ವೆಯಾದ ಕೆಲವೇ ವರ್ಷಗಳಲ್ಲಿ ಮಗ ಸಾವು: ಸೊಸೆಗೆ ಮರುಮದುವೆ ಮಾಡಿಸಿದ ಮಾಜಿ ಶಾಸಕ

ನಿಷೇಧದ ನಡುವೆಯೂ ಕೇರಳದ ಕಾಂಗ್ರೆಸ್​ ಘಟಕದಿಂದ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನ

ಗುರುಲಿಂಗಸ್ವಾಮಿ ಹೊಳಿಮಠ ಹೆಸರಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿ ಆಯ್ಕೆ

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…