More

    ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಸುತ್ತಲು ಮರ ಮತ್ತು ಎಲೆಗಳು ಉದರಿರುವ ಖಾಲಿ ಪ್ರದೇಶವನ್ನು ನೋಡಬಹುದು. ಫೋಟೋದ ಒಂದು ಭಾಗದಲ್ಲಿ ನಾಯಿಯೊಂದು ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಎಲೆಗಳ ಬಣ್ಣ ಮತ್ತು ನಾಯಿಯ ಬಣ್ಣ ಒಂದೇ ಆಗಿದ್ದು, ಎರಡೂ ಕೂಡ ಬೆರೆತು ಹೋಗಿದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ನಾಯಿಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    10 ಸೆಕೆಂಡ್​ ಸಮಯದಲ್ಲಿ ನೀವು ನಾಯಿಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ನಾಯಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!

    ಹಾಸನದಲ್ಲೊಂದು ಕರುಳು ಹಿಂಡುವ ಘಟನೆ: ತಾಯಿ ಮಾಡಿದ ತಪ್ಪಿಗೆ ಏನೂ ಅರಿಯದ ಕಂದಮ್ಮ ದುರಂತ ಸಾವು

    ಉಜ್ಬೇಕಿಸ್ತಾನದಲ್ಲಿ ಮಕ್ಕಳ ಸಾವು: ಭಾರತ ಮೂಲದ 2 ಕೆಮ್ಮಿನ ಸಿರಪ್​ ಬಳಸದಂತೆ WHO ಎಚ್ಚರಿಕೆ

    ಆರ್‌ವಿ ವಿಶ್ವವಿದ್ಯಾಲಯದಿಂದ 10 ಕೋಟಿ ರೂ. ವಿದ್ಯಾರ್ಥಿ ವೇತನ: 500ಕ್ಕೂ ಹೆಚ್ಚು UG, PG ವಿದ್ಯಾರ್ಥಿಗಳಿಗೆ ಪ್ರಯೋಜನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts