ಬಿಡುಗಡೆಗೂ ಮುನ್ನ ರಾಜ್ಯದಲ್ಲಿ Pushpa-2 ಚಿತ್ರತಂಡಕ್ಕೆ ಶಾಕ್​; ಪ್ರದರ್ಶನ ರದ್ದು ಮಾಡಿ ಆದೇಶ

Pushpa 2

ಬೆಂಗಳೂರು: ಅಲ್ಲು ಅರ್ಜುನ್​-ರಶ್ಮಿಕಾ ನಟನೆಯ ಪುಷ್ಪ-2 (Pushpa-2) ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿನಿಮಾವನ್ನು ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭಅರತ ಸೇರಿದಂತೆ ವಿಶ್ವಾದಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಚಿತ್ರದ ಪ್ರದರ್ಶನವನ್ನು ರದ್ದುಪಡಿಸುವಂತೆ ಆದೇಶ ಹೊರಡಿಸಲಾಗಿದೆ.

ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಿನಿಮಾ ತಂಡಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಾಕ್​ ನೀಡಿದ್ದಾರೆ. ಮಯ ಪಾಲನೆ ಮಾಡದೇ ಪುಷ್ಪ 2 ಪ್ರದರ್ಶನಕ್ಕೆ ಮುಂದಾದ ಚಿತ್ರಮಂದಿರಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಾಕ್​ ನೀಡಿದ್ದಾರೆ. ಅವಧಿಗೂ ಮುನ್ನ ಚಿತ್ರ ಪ್ರದರ್ಶನಕ್ಕೆ ಮುಂದಾಗಿದ್ದ ಥಿಯೇಟರ್​ಗಳಿಗೆ ಜಿಲ್ಲಾಧಿಕಾರಿ ಕಡಿವಾಣ ಹಾಕಿದ್ದು, ಈ ಮೂಲಕ ಫ್ಯಾನ್ಸ್​ ಹಾಗೂ ಚಿತ್ರತಂಡಕ್ಕೆ ಶಾಕ್​ ನೀಡಿದ್ದಾರೆ.

ಕರ್ನಾಟಕದಲ್ಲಿ ಯಾವುದೇ ಸಿನಿಮಾವನ್ನು ಬೆಳಗ್ಗೆ 6:30ಕ್ಕೂ ಮುನ್ನ ಪ್ರದರ್ಶನ ಮಾಡಬಾರದೆಂದು ರಾಜ್ಯ ಸರ್ಕಾರ ನಿಯಮವನ್ನು ಹೊರಡಿಸಿದೆ. ಇದೆಲ್ಲದರ ಹೊರತಾಗಿಯೂ ಕೆಲವು ಚಿತ್ರಮಂದಿರಗಳಲ್ಲಿ ಬೆಳ್ಳಂಬೆಳಗೆ 3.45ರಿಂದ ಅಭಿಮಾನಿಗಳಿಗಾಗಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ವಿಚಾರ ಹೊರಬರುತ್ತಿದ್ದಂತೆ ಜಿಲ್ಲಾಧಿಕಾರಿ ಇದಕ್ಕೆ ಕಡಿವಾಣ ಹಾಕಿದ್ದು, ಅವಧಿಗೂ ಮುನ್ನ ಯಾವ ಚಿತ್ರವನ್ನು ಪ್ರದರ್ಶಿಸಬಾರದೆಂದು ಆದೇಶ ಹೊರಡಿಸಿದ್ದಾರೆ.

DC Order

ಚಲನಚಿತ್ರ ಪ್ರದರ್ಶನ ನಿಯಮದ ಪ್ರಕಾರ, ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆಯ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಸಿನಿಮಾಗಳನ್ನು ಪ್ರದರ್ಶನ ಮಾಡುವಂತೆ ಇಲ್ಲ ಎಂಬ ರಾಜ್ಯ ಸರ್ಕಾರದ ಆದೇಶವಿದ್ದರೂ ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಅವಧಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ. ಈ ಸಂಬಂಧ 43 ಥಿಯೇಟರ್‌ಗಳ ವಿರುದ್ಧ ಸಿನಿಮಾ ಪ್ರದರ್ಶನ ಮಾಡದಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್​ 05ರಂದು ಪುಷ್ಪ-2 ದಿ ರೂಲ್​ (Pushpa-2 The Rule) ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರತಂಡ ಈಗಾಗಲೇ ದೇಶದ ವಿವಿಧ ನಗರಗಳಲ್ಲಿ ಭರ್ಜರಿ ಪ್ರಮೋಷನ್​ ಮಾಡುತ್ತಿದೆ. ಪಾಟ್ನಾ, ಚೆನ್ನೈ, ಕೋಲ್ಕತ್ತಾ, ಕೊಚ್ಚಿ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ಮಹಾನಗರಗಳಿಗೆ ಭೇಟಿ ಕೊಡುವ ಮೂಲಕ ಪುಷ್ಪ ತಂಡ ಪ್ರಚಾರ ನಡೆಸಿದ್ದು, ಅಭಿಮಾನಿಗಳು ಚಿತ್ರವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿರುವ ನಡುವೆಯೇ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಫ್ಯಾನ್ಸ್​ಗೆ ಶಾಕ್​ ನೀಡಿದ್ದಾರೆ.

ವಿರಾಟ್​, ಭಾರತ ತಂಡ ಪಾಕಿಸ್ತಾನದಲ್ಲಿ ಆಡಲು ಕಾತುರರಾಗಿದ್ದಾರೆ; Champions Trophy ವಿಚಾರವಾಗಿ ಶಾಕಿಂಗ್​ ಹೇಳಿಕೆ ನೀಡಿದ ಪಾಕ್​ ಮಾಜಿ ಆಟಗಾರ

ಐಸಿಸಿ ಅಧ್ಯಕ್ಷರಾಗಿ Jay Shah ಪದಗ್ರಹಣ; ಬಿಸಿಸಿಐ ಮುಂದಿನ ಕಾರ್ಯದರ್ಶಿ ಯಾರು ಗೊತ್ತಾ?

 

 

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…