ಸುಗ್ರೀವಾಜ್ಞೆ ಮತ್ತೆ ರಾಜಭವನಕ್ಕೆ

blank

ಬೆಂಗಳೂರು: ಕಿರು ಸಾಲ ವಸೂಲಿಗೆ ಅಂಕುಶ ಹಾಕಲು ಸರ್ಕಾರ ತಂದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಎತ್ತಿದ್ದ ಆಕ್ಷೇಪಣೆಗಳಿಗೆ ಸರ್ಕಾರ ಸಮಜಾಯಿಷಿ ನೀಡಿ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿದೆ. ಈ ಮೂಲಕ ಮತ್ತೊಂದು ಸುತ್ತಿನ ಜಗ್ಗಾಟ ಆರಂಭವಾದಂತಾಗಿದೆ.

ವಿಧಾನ ಮಂಡಲ ಅಧಿವೇಶನ ನಡೆಯುತ್ತಿರದ ಕಾರಣಕ್ಕೆ ಸರ್ಕಾರ ಸುಗ್ರೀವಾಜ್ಞೆಗೆ ಮೊರೆಹೋಗಿದ್ದು, ರಾಜ್ಯಪಾಲರು ಸಹಿ ಹಾಕಿದಲ್ಲಿ ತಕ್ಷಣವೇ ಕಾನೂನು ಜಾರಿ ಮಾಡಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಮಸೂದೆಗೆ ಶಾಸನ ಸಭೆಯ ಒಪ್ಪಿಗೆ ಪಡೆದುಕೊಳ್ಳಲಿದೆ. ‘ಬಲವಂತದ ಸಾಲ ವಸೂಲಾತಿ ನಿಯಂತ್ರಣ ಸುಗ್ರೀವಾಜ್ಞೆ, 2025’ಕ್ಕೆ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅಂಕಿತ ಹಾಕದೇ ಹಿಂದಿರುಗಿಸಿ, ಪ್ರಮುಖ ಆರು ಅಂಶಗಳಿಗೆ ಸ್ಪಷ್ಟೀಕರಣಗಳನ್ನು ಸರ್ಕಾರದಿಂದ ಬಯಸಿದ್ದರು. ಬಡವರು ಹಾಗೂ ಸಾಲ ಕೊಟ್ಟವರ ಮೇಲೂ ಅಡ್ಡ ಪರಿಣಾಮ ಬೀರಲಿದೆ.

ನ್ಯಾಯಬದ್ಧ ಹಕ್ಕು ಮೊಟಕು ಕಾನೂನುಬಾಹಿರವೆಂದು ಅವರು ಆಕ್ಷೇಪಿಸಿದ್ದರು. ಕಾನೂನು ಇಲಾಖೆಯು ತಕ್ಷಣವೇ ಸಮಜಾಯಿಷಿ ಸಿದ್ಧಪಡಿಸಿ ಮುಖ್ಯಮಂತ್ರಿಗೆ ಕಳುಹಿಸಿತ್ತು. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸಚಿವರೊಂದಿಗೆ ಸಭೆ ನಡೆಸಿ ಸ್ಪಷ್ಟೀಕರಣ ಅಂತಿಮಗೊಳಿಸಿ ರಾಜಭವನಕ್ಕೆ ಕಳುಹಿಸಿದರು. ಸಂವಿಧಾನ, ನೈಸರ್ಗಿಕ ನ್ಯಾಯದ ಚೌಕಟ್ಟಿನಲ್ಲಿದೆ ಎಂದು ಮನವರಿಕೆ ಮಾಡಿಕೊಡುವ ಒಕ್ಕಣೆಯೊಂದಿಗೆ ಸುಗ್ರೀವಾಜ್ಞೆಗೆ ಮನ್ನಣೆ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…