More

    ಸಮಸ್ಯೆ ನಿವಾರಣೆಗೆ ಸಂಘಟನೆ ಅಗತ್ಯ

    ಚಾಮರಾಜನಗರ : ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ಹಸಿರು ಸೇನೆ ಮತ್ತು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.


    ಹನೂರು ತಾಲೂಕಿನ ಕೆ.ವಿ.ಎನ್.ದೊಡ್ಡಿಯಲ್ಲಿ ಗುರುವಾರ ಹಸಿರು ಸೇನೆ ಮತ್ತು ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಹೆಚ್ಚು ವಿಸ್ತೀರ್ಣವನ್ನು ಹೊಂದಿರುವ ಹನೂರು ತಾಲೂಕಿನಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿದ್ದು, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಇನ್ನಿತರ ಮೂಲ ಸೌಕರ್ಯದಿಂದ ವಂಚಿತವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.


    ಇದರಿಂದ ಇಲ್ಲಿನ ಜನರು ಹಲವು ದಶಕದಿಂದಲೂ ಕಷ್ಟದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಈ ಬಗ್ಗೆ ತಿಳಿದಿದ್ದರೂ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಗ್ರಾಮಗಳಲ್ಲಿ ಸಮಸ್ಯೆಗಳು ತಾಂಡವಾಡುತ್ತಿವೆ ಎಂದು ಅಸಮಾಧಾನಗೊಂಡರು.


    ಇನ್ನು ರೈತರಿಗೆ ಸರ್ಕಾರದಿಂದ ಸಮರ್ಪಕವಾಗಿ ಸವಲತ್ತುಗಳು ಸಿಗುತ್ತಿಲ್ಲ. ಇತ್ತ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿಯಲ್ಲಿ ನಷ್ಟ ಅನುಭವಿಸುವಂತಾಗಿದೆ. ಪರಿಹಾರ ದೊರಕಿಸಿಕೊಡುವಲ್ಲಿ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಪರಿಣಾಮ ರೈತರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಹಾಗೂ ಸರ್ಕಾರದ ಸವಲತ್ತು ಪಡೆಯಬೇಕಾದರೆ ಸಂಘಟನೆ ಅಗತ್ಯವಾಗಿದೆ. ಈ ದಿಸೆಯಲ್ಲಿ ಗ್ರಾಮದಲ್ಲಿ ರೈತ ಸಂಘ ಉದ್ಘಾಟನೆಯಾಗುತ್ತಿರುವುದು ಇದಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

    ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೋಮಣ್ಣ, ಹನೂರು ಘಟಕಾಧ್ಯಕ್ಷ ಚಂಗಡಿ ಕರಿಯಪ್ಪ, ರೈತ ಮುಖಂಡರಾದ ಶಾಂತಕುಮಾರ್, ಭೈರನತ್ತ ರಾಜು, ಚಿಕ್ಕರಾಜು, ಶಿವಪ್ಪ, ಶ್ರೀನಿವಾಸ್, ಭದ್ರ, ರಾಜಪ್ಪ, ಚಂದ್ರಪ್ಪ ಇನ್ನಿತರರು ಇದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts